ಸ್ಮಾರ್ಟ್ ಕಾರ್ಡ್ ಯೋಜನೆಗೆ ಸಿಎಂ ಚಾಲನೆ
ಬೆಂಗಳೂರು, ಜೂ. 26 : ಸಾರಿಗೆ ಇಲಾಖೆಯಿಂದ ನೀಡಲಾಗುತ್ತಿರುವ ಸ್ಮಾರ್ಟ್ಕಾರ್ಡ್'ಅತ್ಯಂತ ನಾಗರಿಕ ಸ್ನೇಹಿ ಹೆಜ್ಜೆ, ಮಾಹಿತಿ ತಂತ್ರಜ್ಞಾನವನ್ನು ಅಭಿವೃದ್ಧಿಗೆ, ನಾಗರಿಕರ ಅನುಕೂಲತೆಗಳಿಗಾಗಿ ಬಳಕೆ ಮಾಡಿದ್ದು ಅಂಗೈ ಅಗಲದ ಕಾರ್ಡಿನಲ್ಲಿ ಸಮಸ್ತ ಮಾಹಿತಿಯೂ ಅಡಕವಾಗೊಂಡಿದೆ. ಇದು ದೇಶದಲ್ಲಿಯೇ ಪ್ರಥಮ ಹೆಜ್ಜೆಯಾಗಿದೆಯೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಗಣಕೀಕೃತ ಸೇವೆ ನೀಡಲು ಸಿದ್ದಗೊಳಿಸರುವ 'ಸ್ಮಾರ್ಟ್ ಕಾರ್ಡ್' ನ್ನು ಇಂದು ವಿಧಾನಸೌಧದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.
ಬೆಂಗಳೂರು ನಗರದ 5 ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಈ ಯೋಜನೆ ಕಾರ್ಯಾರಂಭಗೊಂಡಿದ್ದು, ಉಳಿದ 50 ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಹಂತ ಹಂತವಾಗಿ ಸೆಪ್ಟೆಂಬರ್ 2009 ರೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಸಾರಿಗೆ ಮತ್ತು ಸಂಪರ್ಕ ಅಭಿವೃದ್ಧಿಗೆ ಅತ್ಯಂತ ಮುಖ್ಯ. ಜನಸಾಮಾನ್ಯರ ಸೌಲಭ್ಯಕ್ಕಾಗಿ ಸಾರಿಗೆ ಸೌಲಭ್ಯಗಳನ್ನು ಅತ್ಯುತ್ತಮಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದರು
ನಾಲ್ಕು ಕಂದಾಯ ವಿಭಾಗಗಳಲ್ಲಿ ಭಾರಿ ವಾಹನಗಳ ಚಾಲನಾ ತರಬೇತಿ ಆರಂಭಿಸಲಾಗುತ್ತಿದೆ. ಚಾಲಕರ ಕಲ್ಯಾಣ ಕಾರ್ಯಕ್ರಮಗಳಿಗಾಗಿ 2 ಕೋಟಿ ರೂ. ಮೀಸಲಿಡಲಾಗಿದೆ. ಸರಕು ವಾಹನಗಳು ಅಧಿಕ ಭಾರ ಹೊತ್ತೊಯ್ಯುವುದನ್ನು ನಿಯಂತ್ರಿಸಲು ಪ್ರಮುಖ ರಸ್ತೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಮುಖ್ಯ ರಸ್ತೆಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪನೆಗಾಗಿ 3 ಕೋಟಿ ರೂ. ಒದಗಿಸಲಾಗಿದೆಯೆಂದು ಮುಖ್ಯಮಂತ್ರಿಗಳು ತಿಳಿಸಿದರು.
(ದಟ್ಸ್ ಕನ್ನಡವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications