ಬಿಬಿಎಂಪಿ ಚುನಾವಣೆ ಮುಂದಕ್ಕೆ: ವಿಜಯ್ ಕುಮಾರ್
ಬೆಂಗಳೂರು,ಜೂ. 28 : ಬಿಬಿಎಂಪಿಗೆ ಸೆಪ್ಟೆಂಬರ್ನಲ್ಲಿ ಚುನಾವಣೆ ನಡೆಸುವುದು ಸಾಧ್ಯವಾಗಲಾರದು ಎಂದು ಶಾಸಕ ಬಿ.ಎನ್.ವಿಜಯ ಕುಮಾರ್ ಹೇಳಿದ್ದಾರೆ.
ನೂತನ ಲೋಕಸಭೆ ಸದಸ್ಯರಿಗೆ ಕರ್ನಾಟಕ ವಕೀಲರ ಒಕ್ಕೂಟ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಲಿಕೆಗೆ ಸೆಪ್ಟೆಂಬರ್ ವೊಳಗೆ ಚುನಾವಣೆ ನಡೆಸಲು ಸಾಧ್ಯ ವಾಗಲಾರದು.ಮುಂದೂಡುವ ಸಂದರ್ಭ ಬರಬಹುದು ಎಂದು ಹೇಳಿದರು.
ಪಾಲಿಕೆಗೆ ಅವಿದ್ಯಾವಂತರು ಆರಿಸಿ ಬರುತ್ತಿದ್ದಾರೆ. ಎರಡು,ಮೂರನೇ ತರಗತಿ ಓದಿದವರು ಆರಿಸಿ ಬಂದು, ಮೋರಿ,ರಸ್ತೆ ಹಾಗೂ ವಿದ್ಯುತ್ ದೀಪ ಒತ್ತುವರಿ ಆಗಿದೆ ಎಂದು ಕೂಗಾಡುತ್ತಾರೆ. ಅಭಿವೃದ್ಧಿ ಬಗ್ಗೆ ಚಿಂತಿಸಲಾರರು. ವಿದ್ಯಾವಂತರು ಆರಿಸಿ ಬಂದರೆ,ಪಾಲಿಕೆ ಅಭಿವೃದ್ಧಿಯೆಡೆಗೆ ನಡೆಯಲಿದೆ ಎಂದರು. ಪಾಲಿಕೆ ಚುನಾವಣೆ, ವಿಧಾನಸಭೆ/ಲೋಕಸಭೆ ಚುನಾವಣೆಯಂತಲ್ಲ.ಇಲ್ಲಿ ಪಕ್ಷ ,ಪ್ರಣಾಳಿಕೆಗಿಂತವ್ಯಕ್ತಿ ಮುಖ್ಯವಾಗುತ್ತಾನೆ. ಈ ಬಾರಿ ಪಕ್ಷದ ವತಿಯಿಂದ 10 ರಿಂದ 15 ವಕೀಲರನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.
ಚುನಾವಣೆ ಮುಂದಕ್ಕೆ ಹೋಗಬಹುದು ಎಂದು ಶಾಸಕರ ಮಾತನ್ನು ಪುಷ್ಟೀಕರಿಸಿದ ಸಂಸದ ಡಿ.ಬಿ.ಚಂದ್ರೇಗೌಡ, ಆಕ್ಷೇಪಣೆ ಸಲ್ಲಿಸಲು ಹದಿನೈದು ಮತ್ತು ವಾರ್ಡ್ ಮೀಸಲಿಗೆ
ಹದಿನೈದು ದಿನ ಬೇಕಾಗಲಿದೆ. ಚುನಾವಣೆಗೆ ಮೂವತ್ತು ದಿನ ಮೊದಲು ಘೋಷಣೆ ಹೊರಬೀಳಬೇಕು. ನಂತರವೇ ಅಧಿಸೂಚನೆ. ಹೀಗಾಗಿ, ಸೆಪ್ಟೆಂಬರ್ ಒಳಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದರು.
ಪ್ರತಿಪಕ್ಷ ನಾಯಕರು ಅಧಿಕಾರಿಗಳ ಸಭೆ ನಡೆಸುವುದನ್ನು ಸರಕಾರ ಸಹಿಸಬಾರದು.ಅವರಿಗೆ ಆ ಅಧಿಕಾರವಿಲ್ಲ. ಎರಡೂ ಸದನದ ಪ್ರತಿ ಪಕ್ಷ ನಾಯಕರಾಗಿರುವ ಅನುಭವ ತಮಗಿದೆ.
ಕ್ಯಾಬಿನೆಟ್ ದರ್ಜೆ ಇದ್ದರೂ, ಸಂಬಳ ಸೌಲಭ್ಯ ವಿಧಾನಸಭೆ ಅಧ್ಯಕ್ಷರ ವ್ಯಾಪ್ತಿಗೆ ಬರುತ್ತದೆ. ಪ್ರತಿಪಕ್ಷದ ನಾಯಕರು ಸರಕಾರದ ಭಾಗ ಅಲ್ಲ ಎಂದರು. ಸಂಸದ ಪಿ.ಸಿ.ಮೋಹನ್, ಒಕ್ಕೂಟದ ಕೆ.ಎನ್. ಸುಬ್ಬಾರೆಡ್ಡಿ, ರಾಮಮೂರ್ತಿ, ಭಕ್ತವತ್ಸಲ ಮತ್ತಿತರರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications