ಬಿಬಿಎಂಪಿ ಚುನಾವಣೆ ಮುಂದಕ್ಕೆ: ವಿಜಯ್ ಕುಮಾರ್
ಬೆಂಗಳೂರು,ಜೂ. 28 : ಬಿಬಿಎಂಪಿಗೆ ಸೆಪ್ಟೆಂಬರ್ನಲ್ಲಿ ಚುನಾವಣೆ ನಡೆಸುವುದು ಸಾಧ್ಯವಾಗಲಾರದು ಎಂದು ಶಾಸಕ ಬಿ.ಎನ್.ವಿಜಯ ಕುಮಾರ್ ಹೇಳಿದ್ದಾರೆ.
ನೂತನ ಲೋಕಸಭೆ ಸದಸ್ಯರಿಗೆ ಕರ್ನಾಟಕ ವಕೀಲರ ಒಕ್ಕೂಟ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಲಿಕೆಗೆ ಸೆಪ್ಟೆಂಬರ್ ವೊಳಗೆ ಚುನಾವಣೆ ನಡೆಸಲು ಸಾಧ್ಯ ವಾಗಲಾರದು.ಮುಂದೂಡುವ ಸಂದರ್ಭ ಬರಬಹುದು ಎಂದು ಹೇಳಿದರು.
ಪಾಲಿಕೆಗೆ ಅವಿದ್ಯಾವಂತರು ಆರಿಸಿ ಬರುತ್ತಿದ್ದಾರೆ. ಎರಡು,ಮೂರನೇ ತರಗತಿ ಓದಿದವರು ಆರಿಸಿ ಬಂದು, ಮೋರಿ,ರಸ್ತೆ ಹಾಗೂ ವಿದ್ಯುತ್ ದೀಪ ಒತ್ತುವರಿ ಆಗಿದೆ ಎಂದು ಕೂಗಾಡುತ್ತಾರೆ. ಅಭಿವೃದ್ಧಿ ಬಗ್ಗೆ ಚಿಂತಿಸಲಾರರು. ವಿದ್ಯಾವಂತರು ಆರಿಸಿ ಬಂದರೆ,ಪಾಲಿಕೆ ಅಭಿವೃದ್ಧಿಯೆಡೆಗೆ ನಡೆಯಲಿದೆ ಎಂದರು. ಪಾಲಿಕೆ ಚುನಾವಣೆ, ವಿಧಾನಸಭೆ/ಲೋಕಸಭೆ ಚುನಾವಣೆಯಂತಲ್ಲ.ಇಲ್ಲಿ ಪಕ್ಷ ,ಪ್ರಣಾಳಿಕೆಗಿಂತವ್ಯಕ್ತಿ ಮುಖ್ಯವಾಗುತ್ತಾನೆ. ಈ ಬಾರಿ ಪಕ್ಷದ ವತಿಯಿಂದ 10 ರಿಂದ 15 ವಕೀಲರನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.
ಚುನಾವಣೆ ಮುಂದಕ್ಕೆ ಹೋಗಬಹುದು ಎಂದು ಶಾಸಕರ ಮಾತನ್ನು ಪುಷ್ಟೀಕರಿಸಿದ ಸಂಸದ ಡಿ.ಬಿ.ಚಂದ್ರೇಗೌಡ, ಆಕ್ಷೇಪಣೆ ಸಲ್ಲಿಸಲು ಹದಿನೈದು ಮತ್ತು ವಾರ್ಡ್ ಮೀಸಲಿಗೆ
ಹದಿನೈದು ದಿನ ಬೇಕಾಗಲಿದೆ. ಚುನಾವಣೆಗೆ ಮೂವತ್ತು ದಿನ ಮೊದಲು ಘೋಷಣೆ ಹೊರಬೀಳಬೇಕು. ನಂತರವೇ ಅಧಿಸೂಚನೆ. ಹೀಗಾಗಿ, ಸೆಪ್ಟೆಂಬರ್ ಒಳಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದರು.
ಪ್ರತಿಪಕ್ಷ ನಾಯಕರು ಅಧಿಕಾರಿಗಳ ಸಭೆ ನಡೆಸುವುದನ್ನು ಸರಕಾರ ಸಹಿಸಬಾರದು.ಅವರಿಗೆ ಆ ಅಧಿಕಾರವಿಲ್ಲ. ಎರಡೂ ಸದನದ ಪ್ರತಿ ಪಕ್ಷ ನಾಯಕರಾಗಿರುವ ಅನುಭವ ತಮಗಿದೆ.
ಕ್ಯಾಬಿನೆಟ್ ದರ್ಜೆ ಇದ್ದರೂ, ಸಂಬಳ ಸೌಲಭ್ಯ ವಿಧಾನಸಭೆ ಅಧ್ಯಕ್ಷರ ವ್ಯಾಪ್ತಿಗೆ ಬರುತ್ತದೆ. ಪ್ರತಿಪಕ್ಷದ ನಾಯಕರು ಸರಕಾರದ ಭಾಗ ಅಲ್ಲ ಎಂದರು. ಸಂಸದ ಪಿ.ಸಿ.ಮೋಹನ್, ಒಕ್ಕೂಟದ ಕೆ.ಎನ್. ಸುಬ್ಬಾರೆಡ್ಡಿ, ರಾಮಮೂರ್ತಿ, ಭಕ್ತವತ್ಸಲ ಮತ್ತಿತರರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications