ಸಾಹಿತಿ ಬಿ.ಎಸ್.ವೆಂಕಟಲಕ್ಷ್ಮಿ ವಿಧಿವಶ
ಬೆಂಗಳೂರು, ಜೂ. 28: ಹಿರಿಯ ಪತ್ರಕರ್ತೆ, ಸಾಹಿತಿ ಬಿ.ಎಸ್. ವೆಂಕಟಲಕ್ಷ್ಮಿ (63) ಅವರು ಹೃದಯಾಘಾತದಿಂದ ಶನಿವಾರ ಬೆಂಗಳೂರಿನಲ್ಲಿ ನಿಧನರಾದರು. ವೆಂಕಟಲಕ್ಷ್ಮಿ ಅವರು ಕನ್ನಡ ಪತ್ರಿಕೋದ್ಯಮದಲ್ಲಿ ಬಹಳ ಸಾಧನೆ ಮಾಡಿದವರು. ವಾರ್ತಾ ಇಲಾಖೆಯಲ್ಲಿ ಸುಮಾರು 15 ವರ್ಷಗಳ ಕಾಲ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಸುಧಾ, ಮಯೂರ, ಪ್ರಜಾವಾಣಿ, ಲಂಕೇಶ್, ಹಾಯ್ ಬೆಂಗಳೂರು ಪತ್ರಿಕೆಗಳಲ್ಲಿ ಪ್ರಚಲಿತ ವಿಷಯಗಳ ಮೇಲೆ ನಿರಂತರ ಲೇಖನಗಳನ್ನು ಬರೆಯುವ ಜತೆಗೆ
ಹವ್ಯಾಸಿ ಪತ್ರಕರ್ತರಾಗಿ ಗಮನ ಸೆಳೆದಿದ್ದರು. ಮಯೂರ ನಿಯತಕಾಲಿಕ ದಲ್ಲಿ ಪತ್ನಿಯರು ಕಂಡಂಥ ಪ್ರಸಿದ್ಧರು' ಎನ್ನುವ ಅವರ ಅಂಕಣ ಹೆಚ್ಚು ಜನಪ್ರಿಯತೆ ಪಡೆದಿತ್ತು.ಕಳೆದ 9 ವರ್ಷದಿಂದ ಚರ್ಚೆಗೊಂದು ಚಾವಡಿ' ಎಂಬ ಮಾಸಿಕ ಪತ್ರಿಕೆಯನ್ನು ನಡೆಸುತ್ತಿದ್ದರು.ಅವರ ಬದುಕು- ಬವಣೆ-ಭರವಸೆ' ಎಂಬ ಗ್ರಂಥಕ್ಕೆ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿತ್ತು. ಅಲ್ಲದೆ ಮಲ್ಲಿಕಾರ್ಜುನ ಮನ್ಸೂರ್ ಹಾಗೂ ಎಂ.ಬಿ. ಪಾಟೀಲ್ ಅವರ ಬಗ್ಗೆಯೂ ಪುಸ್ತಕ ರಚಿಸಿದ್ದರು.
ಲೇಖನಿ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದ ವೆಂಕಟಲಕ್ಷ್ಮಿ, ತಮ್ಮ ದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆ ಹಾಗೂ ಕಣ್ಣುಗಳನ್ನು ಲಯನ್ಸ್ ಕಣ್ಣಾಸ್ಪತ್ರೆಗೆ ದಾನ ಮಾಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications