ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ
ಮೈಸೂರು, ಜೂ. 28: ಮಾಹಿತಿ ಹಕ್ಕು ಅಧಿನಿಯಮದ ಪ್ರಕಾರ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಆಯಾಯ ಕಚೇರಿಗಳ ಮಾಹಿತಿ ಅಧಿಕಾರಿಗಳು ಮಾಹಿತಿ ನೀಡದಿದ್ದರೆ ಅಂತಹ ಅಧಿಕಾರಿಗಳಿಗೆ ದಂಡ ವಿಧಿಸಬಹುದಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕುಆಯೋಗದ ಆಯುಕ್ತ ಜೆ ಎಸ್ ವಿರೂಪಾಕ್ಷಯ್ಯ ಅವರು ತಿಳಿಸಿದರು.
ನಗರದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಇಂದು ಮಾಹಿತಿ ಹಕ್ಕು ಅಧಿನಿಯಮ ಕಲಂ 4 (1) ಹಾಗೂ ನಾಗರೀಕ ಸನ್ನದು ಕುರಿತು ಒಂದು ದಿನದ ವಿಭಾಗ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಮಾಹಿತಿ ಕೋರಿ ಬರುವ ಅರ್ಜಿದಾರರಿಗೆ ಮಾಹಿತಿ ಅಧಿಕಾರಿಗಳು ಸ್ಪಂದಿಸಿ ಮಾಹಿತಿ ನೀಡಬೇಕು. ಒಂದು ವೇಳೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡದಿದ್ದಲ್ಲಿ ಅಂತಹ ಅಧಿಕಾರಿಗಳಿಗೆ ದಿನವೊಂದಕ್ಕೆ 250 ರೂ.ಗಳಂತೆ ಗರಿಷ್ಠ 25,000 ರೂ.ಗಳವರೆಗೆ ದಂಡ ವಿಧಿಸುವುದರ ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತೆ ಮಾಹಿತಿ ಆಯುಕ್ತರು ಆದೇಶಿಸಬಹುದಾಗಿದೆ ಎಂದು ಹೇಳಿದರು.
ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿಯೊಂದಿಗೆ ೧೦ ರೂ.ಗಳ ಶುಲ್ಕ ಪಾವತಿಸಬೇಕು. ಶುಲ್ಕವನ್ನು ಭಾರತೀಯ ಪೋಸ್ಟಲ್ ಆರ್ಡರ್, ಬ್ಯಾಂಕರ್ಸ್ ಚೆಕ್, ಡಿಡಿ ಅಥವಾ ನಗದು ಹಣದ ಮೂಲಕ ಪಾವತಿಸಬಹುದು. ಬಡತನ ರೇಖೆಗಿಂತ ಕೆಳಗಿರುವವರು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಆದರೆ ಅರ್ಜಿಯೊಂದಿಗೆ ಬಿ ಪಿ ಎಲ್ ದೃಢೀಕರಣ ಪ್ರತಿ ಲಗತ್ತಿಸಬೇಕಾಗುತ್ತದೆ ಎಂದ ಅವರು ಎ೪ ಗಾತ್ರದ ಕಾಗದದಲ್ಲಿ ಮಾಹಿತಿ ಕೇಳಿದರೆ ಪ್ರತಿ ಪುಟಕ್ಕೆ ರೂ. 10, ಎ4 ಗಾತ್ರದ ಪ್ರತಿ ಪುಟಕ್ಕೆ ಕಲಂ 4 (1) (ಬಿ) ನಲ್ಲಿ ನಮೂದಿಸಿರುವ ದಾಖಲೆಗಳಿಗೆ ರೂ. ಒಂದು, ಭೂಪಟಗಳು, ನಕಾಶೆಗಳು ಅಥವಾ ವರದಿಗಳು ಅಥವಾ ಯಾವುದೇ ತಾಂತ್ರಿಕ ದಾಖಲೆ ಅಥವಾ ಮಾದರಿ ಅಥವಾ ಆಕೃತಿಗಳಾಗಿದ್ದರೆ ಅಗತ್ಯವಿರುವ ಸಾಮಗ್ರಿಗಳು ಮತ್ತು ಶ್ರಮಿಕ ವೆಚ್ಚ ಆಧರಿಸಿ ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ನಿಗಧಿಪಡಿಸುವ ಶುಲ್ಕ ನೀಡಬೇಕಾಗುತ್ತದೆ ಎಂದು ತಿಳಿಸಿದ ಅವರು ಪ್ರತಿ ದಿನಕ್ಕೆ ರಾಜ್ಯ ಮಾಹಿತಿ ಹಕ್ಕು ಆಯೋಗದಿಂದ 240 ಕೇಸ್ಗಳನ್ನು ವಿಲೇ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಆಡಳಿತ ತರಬೇತಿ ಸಂಸ್ಥೆ ಮಹಾನಿರ್ದೇಶಕರಾದ ಡಾ: ಅಮಿತಾ ಪ್ರಸಾದ್ ಅವರು ಅಧ್ಯಕ್ಷತೆ ವಹಿಸಿದ್ದರು. ಚಾಮರಾಜನಗರ ಜಿಲ್ಲೆ ಜಿಲ್ಲಾಧಿಕಾರಿ ಮನೋಜ್ಕುಮಾರ್ ಮೀನಾ ಹಾಗೂ ಮೈಸೂರು ವಿಭಾಗದ ಏಳು ಜಿಲ್ಲೆಗಳ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
(ದಟ್ಸ್ ಕನ್ನಡವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications