ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ
ಮೈಸೂರು, ಜೂ. 28: ಮಾಹಿತಿ ಹಕ್ಕು ಅಧಿನಿಯಮದ ಪ್ರಕಾರ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಆಯಾಯ ಕಚೇರಿಗಳ ಮಾಹಿತಿ ಅಧಿಕಾರಿಗಳು ಮಾಹಿತಿ ನೀಡದಿದ್ದರೆ ಅಂತಹ ಅಧಿಕಾರಿಗಳಿಗೆ ದಂಡ ವಿಧಿಸಬಹುದಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕುಆಯೋಗದ ಆಯುಕ್ತ ಜೆ ಎಸ್ ವಿರೂಪಾಕ್ಷಯ್ಯ ಅವರು ತಿಳಿಸಿದರು.
ನಗರದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಇಂದು ಮಾಹಿತಿ ಹಕ್ಕು ಅಧಿನಿಯಮ ಕಲಂ 4 (1) ಹಾಗೂ ನಾಗರೀಕ ಸನ್ನದು ಕುರಿತು ಒಂದು ದಿನದ ವಿಭಾಗ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಮಾಹಿತಿ ಕೋರಿ ಬರುವ ಅರ್ಜಿದಾರರಿಗೆ ಮಾಹಿತಿ ಅಧಿಕಾರಿಗಳು ಸ್ಪಂದಿಸಿ ಮಾಹಿತಿ ನೀಡಬೇಕು. ಒಂದು ವೇಳೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡದಿದ್ದಲ್ಲಿ ಅಂತಹ ಅಧಿಕಾರಿಗಳಿಗೆ ದಿನವೊಂದಕ್ಕೆ 250 ರೂ.ಗಳಂತೆ ಗರಿಷ್ಠ 25,000 ರೂ.ಗಳವರೆಗೆ ದಂಡ ವಿಧಿಸುವುದರ ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತೆ ಮಾಹಿತಿ ಆಯುಕ್ತರು ಆದೇಶಿಸಬಹುದಾಗಿದೆ ಎಂದು ಹೇಳಿದರು.
ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿಯೊಂದಿಗೆ ೧೦ ರೂ.ಗಳ ಶುಲ್ಕ ಪಾವತಿಸಬೇಕು. ಶುಲ್ಕವನ್ನು ಭಾರತೀಯ ಪೋಸ್ಟಲ್ ಆರ್ಡರ್, ಬ್ಯಾಂಕರ್ಸ್ ಚೆಕ್, ಡಿಡಿ ಅಥವಾ ನಗದು ಹಣದ ಮೂಲಕ ಪಾವತಿಸಬಹುದು. ಬಡತನ ರೇಖೆಗಿಂತ ಕೆಳಗಿರುವವರು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಆದರೆ ಅರ್ಜಿಯೊಂದಿಗೆ ಬಿ ಪಿ ಎಲ್ ದೃಢೀಕರಣ ಪ್ರತಿ ಲಗತ್ತಿಸಬೇಕಾಗುತ್ತದೆ ಎಂದ ಅವರು ಎ೪ ಗಾತ್ರದ ಕಾಗದದಲ್ಲಿ ಮಾಹಿತಿ ಕೇಳಿದರೆ ಪ್ರತಿ ಪುಟಕ್ಕೆ ರೂ. 10, ಎ4 ಗಾತ್ರದ ಪ್ರತಿ ಪುಟಕ್ಕೆ ಕಲಂ 4 (1) (ಬಿ) ನಲ್ಲಿ ನಮೂದಿಸಿರುವ ದಾಖಲೆಗಳಿಗೆ ರೂ. ಒಂದು, ಭೂಪಟಗಳು, ನಕಾಶೆಗಳು ಅಥವಾ ವರದಿಗಳು ಅಥವಾ ಯಾವುದೇ ತಾಂತ್ರಿಕ ದಾಖಲೆ ಅಥವಾ ಮಾದರಿ ಅಥವಾ ಆಕೃತಿಗಳಾಗಿದ್ದರೆ ಅಗತ್ಯವಿರುವ ಸಾಮಗ್ರಿಗಳು ಮತ್ತು ಶ್ರಮಿಕ ವೆಚ್ಚ ಆಧರಿಸಿ ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ನಿಗಧಿಪಡಿಸುವ ಶುಲ್ಕ ನೀಡಬೇಕಾಗುತ್ತದೆ ಎಂದು ತಿಳಿಸಿದ ಅವರು ಪ್ರತಿ ದಿನಕ್ಕೆ ರಾಜ್ಯ ಮಾಹಿತಿ ಹಕ್ಕು ಆಯೋಗದಿಂದ 240 ಕೇಸ್ಗಳನ್ನು ವಿಲೇ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಆಡಳಿತ ತರಬೇತಿ ಸಂಸ್ಥೆ ಮಹಾನಿರ್ದೇಶಕರಾದ ಡಾ: ಅಮಿತಾ ಪ್ರಸಾದ್ ಅವರು ಅಧ್ಯಕ್ಷತೆ ವಹಿಸಿದ್ದರು. ಚಾಮರಾಜನಗರ ಜಿಲ್ಲೆ ಜಿಲ್ಲಾಧಿಕಾರಿ ಮನೋಜ್ಕುಮಾರ್ ಮೀನಾ ಹಾಗೂ ಮೈಸೂರು ವಿಭಾಗದ ಏಳು ಜಿಲ್ಲೆಗಳ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
(ದಟ್ಸ್ ಕನ್ನಡವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications