ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂತನ ರಾಜ್ಯಪಾಲ ಭಾರದ್ವಾಜ್ ಇಂದು ಪ್ರಮಾಣ

By Staff
|
Google Oneindia Kannada News

HR Bharadwaj
ಬೆಂಗಳೂರು, ಜೂ.29:ರಾಜ್ಯದ 16ನೇ ರಾಜ್ಯಪಾಲರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಎಚ್ ಆರ್ ಭಾರದ್ವಾಜ್ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು ಸಂಜೆ 4.30 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕ್ಯಾಬಿನೆಟ್ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಮೇಶ್ವರ ಠಾಕೂರ್ ಅವರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ.

ರಾಮೇಶ್ವರ ಠಾಕೂರ್ ಅವರು ಹಿರಿಯರಾಗಿ ನಮ್ಮ ಸರಕಾರಕ್ಕೆ ಎಲ್ಲ ರೀತಿಯ ಮಾರ್ಗದರ್ಶನ ನೀಡಿದ್ದಾರೆ. ಎಲ್ಲ ಹಂತಗಳಲ್ಲಿ ಸಹಕಾರ ನೀಡಿದ್ದಾರೆ. ಅವರಿಗೆ ನಾವು ಚಿರಋಣಿಯಾಗಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X