ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯರೇ ಜನರ ವಿಶ್ವಾಸ ಗಳಿಸಿ : ಬಚ್ಚೇಗೌಡ

By Staff
|
Google Oneindia Kannada News

ಬೆಂಗಳೂರು, ಜು. 1 : ಸರ್ಕಾರಿ ಆಸ್ಪತ್ರೆಗಳಲ್ಲಿ ಜನ ಸಾಮಾನ್ಯರಿಗೆ ವಿಶ್ವಾಸ ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಾರ್ಮಿಕ ಕಲ್ಯಾಣ ಸಚಿವ ಬಿ. ಎನ್. ಬಚ್ಚೇಗೌಡ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ನ 2009-10ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮೊದಲನೇ ತ್ರೈ-ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಮೇಲೆ ಜನರಲ್ಲಿ ನಂಬಿಕೆ ಇಲ್ಲ. ಅತ್ಯಂತ ಕಡು ಬಡವನಾದರೂ ಚಿಕಿತ್ಸೆಗಾಗಿ ಸಾಲ ಮಾಡಿಯಾದರೂ ಖಾಸಗಿ ಶುಶ್ರೂಷಾ ಗೃಹಗಳತ್ತ ತೆರಳುತ್ತಿರುವುದು ಸಾಮಾನ್ಯವಾಗಿದೆ. ಏಕೆ ಹೀಗೆ ? ಎಂದು ಅವರು ಪ್ರಶ್ನಿಸಿದರು.

ಸರ್ಕಾರಿ ಕೆಲಸದಲ್ಲಿ ಶ್ರದ್ಧೆ ಇರಬೇಕು. ವಿಶೇಷವಾಗಿ ವೈದ್ಯರಲ್ಲಿ ಸೇವಾ ಮನೋಭಾವ ಇರಬೇಕು. ಬಡವರಿಗೆ ಸೇವೆ ಒದಗಿಸಲು ಸಾಧ್ಯವಾಗದಿದ್ದಲ್ಲಿ ಸರ್ಕಾರಿ ಆಸ್ಪತ್ರೆಗಳ ಅಸ್ತಿತ್ವ ವ್ಯರ್ಥವಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X