ಕೊಡಗು ಪ್ರತ್ಯೇಕ ರಾಜ್ಯಕ್ಕೆ ನಾಣಯ್ಯ ಬೆಂಬಲ
ಬೆಂಗಳೂರು, ಜು. 1 : ಯಾವುದೇ ಮೂಲಭೂತ ಸೌಲಭ್ಯಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಪ್ರತ್ಯೇಕ ರಾಜ್ಯದ ಕೂಗು ಸಹಜ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊಡಗು ಪ್ರತ್ಯೇಕ ರಾಜ್ಯದ ಕುರಿತು ಮಾತನಾಡುವ ಯಾವ ಹಕ್ಕು ಇಲ್ಲ ಎಂದು ಜೆಡಿಎಸ್ ಮುಖಂಡ ಎಂ ಸಿ ನಾಣಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರಕಾರದ ಮಲತಾಯಿ ಧೋರಣೆಯಿಂದ ಪ್ರತ್ಯೇಕ ರಾಜ್ಯ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಪ್ರತ್ಯೇಕ ರಾಜ್ಯ ಬೇಡಿಕೆಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರವಾಗಿ ಕಿಡಿಕಾರಿದ ನಾಣಯ್ಯ, ಸರಕಾರದ ಕೊಡಗಿನ ಹಿತವನ್ನು ಮರೆತಿರುವುದು ಏಕೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೇಮಾರ್ ಕೂಡಾ ಕೊಡಗು ಪ್ರತ್ಯೇಕ ರಾಜ್ಯದ ಕೂಗನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಈಗಾಗಲೇ ಸರಕಾರ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)