ಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ

ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ ಸರಕಾರ ವಿಶೇಷ ಅದ್ಯತೆ ನೀಡಲು ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಮಾಧ್ಯಮಕ್ಕೆ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಿದ ಕೀರ್ತಿ ರಾಜ್ಯಕ್ಕೆ ಸಲ್ಲಲಿದೆ ಎಂದರು.
ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಮುಖ್ಯವಾದದ್ದು. ಸಮಾಜದ ಓರೆಕೋರೆಗಳನ್ನು ತಿದ್ದುವಲ್ಲಿ, ಸರಕಾರ ಮೈಮರೆತಾಗ ಲೇಖನಗಳ ಮೂಲಕ ಎಚ್ಚರಿಸುವ ಕೆಲಸ ಶ್ಲಾಘನೀಯ. ಮಾಧ್ಯಮವನ್ನು ಇನ್ನಷ್ಟು ಬಲಪಡಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಮಾಧ್ಯಮ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಪ್ರತಿಭಾವಂತ ಪತ್ರಕರ್ತರನ್ನು ರೂಪಿಸಬಹುದು ಎಂದು ಆಚಾರ್ಯ ಹೇಳಿದರು.
ಸರಕಾರದ ವತಿಯಿಂದ ನೀಡುವ ಟಿಎಸ್ಆರ್ ಪ್ರಶಸ್ತಿಯ ಮೌಲ್ಯವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1 ಲಕ್ಷದಿಂದ 2 ಲಕ್ಷ ರುಪಾಯಿಗೆ ಏರಿಸಲಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಆಚಾರ್ಯ ಹೇಳಿದರು.
ನಂತರ ಮಾತನಾಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಬೆಂಗಳೂರು ಪತ್ರಕರ್ತರ ಕಟ್ಟಡ ಪತ್ರಿಕಾ ಭವನಕ್ಕೆ ಸರಕಾರದ ವತಿಯಿಂದ 3 ಕೋಟಿ ರುಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಪತ್ರಕರ್ತರ ಕಲ್ಯಾಣ ನಿಧಿಗೆ 50 ಲಕ್ಷ ರುಪಾಯಿ ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ಯಶಸ್ವಿನಿ ಯೋಜನೆ ವಿಸ್ತರಿಸಲಾಗುವುದು ಎಂದರು.
(ದಟ್ಸ್ ಕನ್ನಡ ವಾರ್ತೆ)
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications