ಸಲಿಂಗರತಿ ಸಕ್ರಮಬೇಡ : ಮೌಲ್ವಿಗಳು
ನವದೆಹಲಿ, ಜು.1 : ಭಾರತೀಯ ದಂಡ ಸಂಹಿತೆ 377 ನೇ ವಿಧಿಗೆ ತಿದ್ದುಪಡಿ ತರುವ ಕುರಿತು ಭಾರತೀಯ ಮುಸ್ಲಿಂ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಸಲಿಂಗ ರತಿ ಎನ್ನುವುದು ಅಪರಾಧ ಎಂದು ಪರಿಗಣಿಸಲಾಗಿದೆ. ಸಲಿಂಗರತಿ ಸಕ್ರಮಗೊಳಿಸುವುದರಿಂದ ನೈತಿಕತೆ ಮತ್ತು ಧಾರ್ಮಿಕ ಆಚರಣೆಗಳು ಮೇಲೆ ದಾಳಿ ನಡೆಸಿದಂತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿವೆ.
ಜಮಾತೆ ಇ ಇಸ್ಲಾಮಿ ಅಧ್ಯಕ್ಷ ಮೌಲಾನಾ ಜಲಾಲುದ್ದೀನ್ ಓಮರಿ, ದಾರೂಲ್ ಉಲಮ್ ವಕ್ಫ್ ನ ಮೌಲಾನಾ ಮೊಹ್ಮದ್ ಸಲೀಂ ಕಾಶಿಂ, ಶಾಹಿ ಇಮಾಮ್ ಆಫ್ ಜಾಮಾ ಮಸೀದ್ ನ ಮೌಲಾನಾ ಮುಫ್ತಿ ಮುಕ್ರಮ್ ಅಹ್ಮದ್ ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಮುಸ್ಲಿಂ ಧರ್ಮದ ಮುಖಂಡರು, ಯಾವುದೇ ಕಾರಣಕ್ಕೂ ಸಲಿಂಗ ರತಿ ಸಕ್ರಮಗೊಳಿಸಬಾರದು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ. ಸಲಿಂಗ ರತಿ ಸಕ್ರಮದಿಂದ ಸಮಾಜದ ಮೇಲೆ ಭಾರಿ ಪರಿಣಾಮ ಉಂಟಾಗುತ್ತದೆ. ಇದರಿಂದ ಧರ್ಮದ ನೈತಿಕತೆ ನಾಶವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಕಾಯ್ದೆಯ 377 ನೇ ವಿಧಿಗೆ ತಿದ್ದುಪಡಿ ತರುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಈಗ ತದ್ವಿರುದ್ಧವಾದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿತ್ತು. ಸಲಿಂಗ ರತಿಯನ್ನು ಸಕ್ರಮ ಗೊಳಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಈ ಮುಂಚೆ ಹೇಳಿದ್ದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಅವರು ನಂತರ ಅದನ್ನು ನಿರಾಕರಿಸಿದ್ದರು.
ಈ ಕುರಿತು ಸ್ಪಷ್ಟೀಕರಣ ನೀಡಿದ್ದ ಮೋಯ್ಲಿ ಅವರು, ಸಲಿಂಗರತಿಯನ್ನು ಸಕ್ರಮ ಗೊಳಿಸಲಾಗುವುದು ಎಂದು ನಾನು ಎಂದೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಐಪಿಸಿಸೆಕ್ಷನ್ 377 ರ ವಿಧಿಗಳನ್ನು ಇನ್ನೂ ಪರಿಶೀಲಿಸಿಲ್ಲ. ಸಚಿವ ಸಂಪುಟದ ಒಬ್ಬ ಸಚಿವ ಕಾಯ್ದೆಯನ್ನು ಬದಲಿಸುವ ಅಥವಾ ಬದಲಿಸದಿರುವ ಬಗ್ಗೆ ತೀರ್ಮಾನ ಕೈಗೊಳ್ಳಲು ಹೇಗೆ ಸಾಧ್ಯ ಎಂದು ಮೊಯ್ಲಿ ಪ್ರಶ್ನಿಸಿದ್ದರು.
(ಏಜನ್ಸೀಸ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications