ಎಂಕೆಯೊಂದಿಗೆ ಸುಖ ದುಃಖ ಹಂಚಿಕೊಂಡ ಸಿಎಂ
ಚೆನ್ನೈ,
ಜು. 2 : ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದರು. ಇದೊಂದು ಸೌಹಾರ್ದಯುತ ಭೇಟಿಯಾಗಿರುವ ಹಿನ್ನೆಲೆಯಲ್ಲಿ ಹೊಗೇನಕಲ್ ಮತ್ತು ಕಾವೇರಿ ವಿವಾದಕ್ಕೆ ಸಂಬಂಧಿಸಿದ ಯಾವ ವಿಷಯಗಳನ್ನು ಚರ್ಚಿಸಲಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. id="toptextpromo">ಮುಖ್ಯಮಂತ್ರಿ
ಕರುಣಾನಿಧಿ ಅವರು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಿ ಭೇಟಿ ಮಾಡಲು ಆಸಕ್ತಿ ತೋರಿಸಿದರು. ಆದರೆ, ಅವರ ವಯಸ್ಸು, ಅನುಭವ ಮತ್ತು ಅವರು ಭಾರತದ ಹಿರಿಯ ರಾಜಕಾರಣಿ ಎಂಬ ಅಂಶಗಳನ್ನು ಗಮನದಲ್ಲಿಸಿರಿಕೊಂಡು ಚೆನ್ನೈನ ಗೋಪಾಲಪುರಂನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದೆ. ಚರ್ಚೆಯಲ್ಲಿ ಕಾವೇರಿ ಮತ್ತು ಹೊಗೇನಕಲ್ ವಿಷಯಗಳ ಬಗ್ಗೆ ಮಾತುಕತೆ ನಡೆಸಲಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications