ಮಳೆಗಾಗಿ ಪೂಜೆ : ಪೂಜಾರಿಯಾದ ಸರಕಾರ
ಬೆಂಗಳೂರು, ಜು. 2 : ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮುಜರಾಯಿ ಇಲಾಖೆ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಭಾರಿ ದೆಸೆ ತಿರುಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಿಗೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏಕಕಾಲದಲ್ಲಿ ಪೂಜೆ, ಪರ್ಜನ್ಯ ಜಪ ಮಾಡಲು ಸರಕಾರ ಆದೇಶ ಹೊರಡಿಸಿದೆ.
ರಾಜ್ಯದ ಮುಜರಾಯಿ ಇಲಾಖೆಯಲ್ಲಿ ಬರುವ ಸುಮಾರು 34 ಸಾವಿರ ದೇವಾಲಯಗಳಲ್ಲಿ ಪೂಜೆ ನಡೆಸಬೇಕು ಎಂದು ವಸತಿ ಮತ್ತು ಮುಜರಾಯಿ ಖಾತೆ ಸಚಿವ ವಿ ಸೋಮಣ್ಣ ಆದೇಶಿಸಿದ್ದಾರೆ. ಮುಜರಾಯಿ ದೇವಸ್ಥಾನಗಳಿಗೆ ಪೂಜೆ ಉದ್ದೇಶವನ್ನು ಸ್ಪಷ್ಟಪಡಿಸಿರುವ ಸೋಮಣ್ಣ, ಈ ಸಲದ ಮುಂಗಾರು ಮಳೆ ವಿಳಂಬವಾಗಿದೆ ಮತ್ತು ರಾಜ್ಯಾದ್ಯಾಂತ ಶಾಂತಿಗಾಗಿ ಪೂಜೆ ನಡೆಸಲಾಗುವುದು ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೋಮಣ್ಣ, ಮುಂಗಾರು ವಿಳಂಬಕ್ಕಾಗಿ ಪೂಜೆ ಎಂದು ಸ್ಪಷ್ಟಪಡಿಸಿದರು. ಇದು ಎಲ್ಲರಿಗೂ ಒಳ್ಳೆಯದಾಗುವ ಕೆಲಸವಾಗಿದೆ ಎಂದರು.
ಈ ಹಿಂದೆ ಮುಜರಾಯಿ ಖಾತೆ ಸಚಿವರಾಗಿದ್ದ ಕೃಷ್ಣಯ್ಯ ಶೆಟ್ಟಿ ಕೂಡಾ ಶಿವರಾತ್ರಿ ಹಬ್ಬಕ್ಕೆ ರಾಜ್ಯದ ಜನತೆಗೆ ಗಂಗಾಜಲ ವಿತರಣೆ ಮಾಡಿದ್ದು, ತಿರುಪತಿ ಲಡ್ಡು ಹಂಚಿ ಹೆಸರು ಮಾಡಿದ್ದರು. ಇದಕ್ಕೆ ಪರ ವಿರೋಧಗಳು ಬಂದಿದ್ದವು. ಸೋಮಣ್ಣ ಅವರ ಕೈಗೊಂಡಿರುವ ಪೂಜೆ ಕೈಂಕರ್ಯಕ್ಕೂ ಪ್ರತಿಪಕ್ಷಗಳಿಂದ ಟೀಕೆ ವ್ಯಕ್ತವಾಗಿದೆ.
ಅವಿವೇಕಿ ಸರಕಾರ , ಜೆಡಿಎಸ್ ವಿರೋಧ
ಸರಕಾರ ಹೊರಡಿಸಿರುವ ಪೂಜೆ ಕೈಂಕರ್ಯದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಮುಖಂಡ ವೈಎಸ್ ವಿ ದತ್ತ, ಸರಕಾರ ಸಾರ್ವಜನಿಕ ಹಣವನ್ನು ಬೇಕಾಬಿಟ್ಟಿಯಾಗಿ ಪೋಲು ಮಾಡುತ್ತಿದೆ. ಮುಜರಾಯಿ ದೇವಸ್ಥಾನಗಳಲ್ಲಿ ಪೂಜೆ ಮಾಡಲು ಸರಕಾರ ಆದೇಶ ಹೊರಡಿಸಿರುವುದು ಮೂರ್ಖತನದ ಪರಮಾವಧಿ. ಅವಿವೇಕಿ ಸರಕಾರ ತೆರಿಗೆ ಹಣವನ್ನು ಪೂಜೆಗೆಂದು ಹಾಳು ಮಾಡುತ್ತಿರುವುದು ಅತ್ಯಂತ ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications