ಬಿಬಿಎಂಪಿ ಚುನಾವಣೆ ಮತ್ತೆ ಮುಂದಕ್ಕೆ?
ಬೆಂಗಳೂರು, ಜು. 3 : ಬಿಬಿಎಂಪಿ ಚುನಾವಣೆ ನಡೆಸಲು ಇನ್ನಷ್ಟು ಕಾಲಾವಕಾಶ ಕೋರಿ ರಾಜ್ಯ ಹೈಕೋರ್ಟ್ ಗೆ ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಜುಲೈ 31ರೊಳಗೆ ಪಾಲಿಕೆಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ನೀಡಿರುವ ಗಡುವಿನಲ್ಲಿ ಚುನಾವಣೆ ನಡೆಸುವುದು ಸಾಧ್ಯವಿಲ್ಲದ ಕಾರಣ ಸ್ಲಲ್ಪ ಕಾಲಾವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಲು ಸರಕಾರ ಉದ್ದೇಶಿಸಿದೆ.
ಪಾಲಿಕೆಯ ವಾರ್ಡ್ ಪುನರ್ ವಿಂಗಡಣೆಯ ಕುರಿತು ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಸರಿಪಡಿಸಿ ಇನ್ನೊಂದು ವಾರದಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿ ಈ ನಂತರ ಹೈಕೋರ್ಟ್ ಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ. ಹೈಕೋರ್ಟ್ ಈಗಾಗಲೇ ಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಎರಡು ಭಾರಿ ದಡುವು ನೀಡಿದ್ದು, ಮೂರನೇ ಭಾರಿ ಛೀಮಾರಿ ತಪ್ಪಿಸಿಕೊಳ್ಳಲು ರಾಜ್ಯ ಸರಕಾರವೇ ಸ್ವಯಂ ಪ್ರೇರಿತವಾಗಿ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಲು ಮುಂದಾಗಿದೆ.
148ರಷ್ಟಿದ್ದ ವಾರ್ಡ್ ಗಳ ಸಂಖೆಯನ್ನು ಅಭಿವೃದ್ಧಿ ವೃಷ್ಟಿಯಿಂದ 198ಕ್ಕೆ ಪುನರ್ ವಿಂಗಡಣೆ ಮಾಡಿ ಆಕ್ಷೇಪಣೆ ಸಲಹೆ ಸ್ವೀಕರಿಸಿ ಸರಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಮೀಸಲಾತಿ ನಿಗದಿಪಡಿಸಿ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಬೇಕಿದೆ. ಇವೆಲ್ಲ ಪ್ರಕ್ರಿಯೆಗಳನ್ನು ಜುಲೈ 31ರೊಳಗೆ ಮುಗಿಸಲು ಸಾಧ್ಯವಿಲ್ಲ. ಹೀಗಾಗಿ ಸ್ಲಲ್ಪ ಕಾಲಾವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಸರಕಾರ ನಿರ್ಧರಿಸಿದೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)