ಕಾಲುವೆಗಳು ಒಳಚರಂಡಿ ನೀರಿನಿಂದ ಮುಕ್ತ :ಕಟ್ಟಾ

ಇಂದು ಬೆಳಿಗ್ಗೆ 7 ರಿಂದ ಮಲ್ಲೇಶ್ವರಂ, ಹೆಬ್ಬಾಳ, ಬ್ಯಾಟರಾಯನಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್ನಗರ ವಿಧಾನ ಸಭಾ ಕ್ಷೇತ್ರಗಳಲ್ಲಿರುವ ಮಳೆ ನೀರಿನ ಕಾಲುವೆಗಳನ್ನು ಸುಸ್ಥಿತಿಯಲ್ಲಿಡಲು ತೆಗೆದುಕೊಂಡ ಕ್ರಮಗಳನ್ನು ವೀಕ್ಷಿಸುವ ಸಂದರ್ಭದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಚಿವರು ಶೀಘ್ರವೇ ಸಂಬಂಧಪಟ್ಟ ಅಧಿಕಾರಿಗಳೊಡನೆ ಕೇಂದ್ರ ನಗರಾಭಿವೃದ್ಧಿ ಸಚಿವ ಎಸ್. ಜೈಪಾಲ್ ರೆಡ್ಡಿ ಅವರನ್ನು ಭೇಟಿಮಾಡಿ ಮಳೆ ನೀರಿನ ಕಾಲುವೆಗಳನ್ನು ಒಳಚರಂಡಿ ನೀರಿನಿಂದ ಮುಕ್ತಗೊಳಿಸಲು ನರ್ಮ್ (NURM) ನಡಿ 1000 ಕೋಟಿ ರೂ. ಗಳನ್ನು ಒದಗಿಸಲು ಕೋರಲಾಗುವುದು ಎಂದು ತಿಳಿಸಿದರು.
ಕಾರ್ಖಾನೆಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಳಚರಂಡಿ ನೀರನ್ನು ಮಳೆನೀರಿನ ಕಾಲುವೆಗಳಲ್ಲಿ ನೇರವಾಗಿ ಹರಿಯಲು ಬಿಡುವುದರಿಂದ ಇವುಗಳು ಕಲುಷಿತಗೊಳ್ಳುತ್ತಿವೆ. ಸಾರ್ವಜನಿಕರು ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಮಳೆ ನೀರಿನ ಕಾಲುವೆಗಳಲ್ಲಿ ಹಾಕುವುದರಿಂದ ಹಾಗೂ ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಮಳೆನೀರು ಸರಾಗವಾಗಿ ಹರಿಯದೇ ಜನವಸತಿ ಪ್ರದೇಶಗಳು ಜಲಾವೃತಗೊಂಡು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕಠಿಣ ಕ್ರಮ ಜರುಗಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಸಂಚಾರಿ ವಾಹನದ ಜೊತೆಗೆ ಅಗತ್ಯ ಸಿಬ್ಬಂದಿಯನ್ನು ನೀಡಿ ಕಟ್ಟಿಕೊಂಡ ಚರಂಡಿಗಳನ್ನು ಸ್ವಚ್ಚಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶೀಘ್ರ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಹಾಗೂ ನಗರಾಭಿವೃದ್ಧಿ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ತುಕ್ಕು ಹಿಡಿದ ಹಾಗೂ ಕಡಿಮೆ ವ್ಯಾಸವಿರುವ ನೀರಿನ ಪೈಪುಗಳನ್ನು ಬದಲಾಯಿಸುವ ಕಾರ್ಯವನ್ನು 300 ಕೋಟಿ ರೂ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ, ಇದುವರೆಗೆ ಶೇ .40 ರಷ್ಟು ಈ ಕಾರ್ಯ ಪೂರ್ಣಗೊಂಡಿದೆ. ಚಿಕುಂಗುನ್ಯಾ ಮತ್ತು ಡೆಂಗೆ ಕಾಯಿಲೆ ಹರಡುವ ಸೊಳ್ಳೆಗಳ ನಾಶಕ್ಕೆ ನೀರು ನಿಲ್ಲುವ ಪ್ರದೇಶದಲ್ಲಿ ಔಷಧಿ ಸಿಂಪರಣೆ ಹಾಗೂ ಫಾಗಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಮಳೆ ನೀರಿನ ಕಾಲುವೆಗಳಲ್ಲಿನ ಹೂಳನ್ನು ತೆಗೆಯಲು ಜೆ.ಸಿ.ಬಿ. ಯಂತ್ರವನ್ನು ಉಪಯೋಗಿಸಿಕೊಂಡಲ್ಲಿ, ಒಳಚರಂಡಿ ಪೈಪುಗಳು ಹಾಳಾಗುವ ಸಾಧ್ಯತೆಯಿರುವುದರಿಂದ ಕಾಲುವೆಗಳ ಪಕ್ಕದಲ್ಲಿ ಐದು ಮೀಟರ್ ಜಾಗವನ್ನು ವಶಪಡಿಸಿಕೊಂಡು ಅಲ್ಲಿ ಒಳಚರಂಡಿ ಪೈಪುಗಳನ್ನು ಅಳವಡಿಸಲು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಮಾನ್ಯತಾ ಟೆಕ್ನೊ ಪಾರ್ಕ್ ಬಳಿಯಿರುವ ರಾಜ ಕಾಲುವೆಯಲ್ಲಿ ಐದು ಕೆರೆಗಳ ಕೋಡಿ ನೀರು ಹರಿಯುವುದರಿಂದ ಅದರ ಅಗಲವನ್ನು 40ಮೀಟರ್ ವಿಸ್ತರಿಸಲು, ಆ ಪ್ರದೇಶಗಳಲ್ಲಿ ಕಲುಷಿತ ನೀರನ್ನು ಶುದ್ಧೀಕರಿಸುವ ಘಟಕವನ್ನು(STP) ಸ್ಥಾಪಿಸಿ ಹರಿಯುತ್ತಿರುವ ನೀರನ್ನು ಶುದ್ದೀಕರಿಸಿ ಕುಡಿಯುವುದನ್ನು ಹೊರತುಪಡಿಸಿ ಇತರ ಬಳಕೆಗೆ ಲಭ್ಯಗೊಳಿಸಲು ಸೂಕ್ತಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಗ್ಗದಾಸಪುರ ಸಮೀಪದ ಕಾಲುವೆ ಇಕ್ಕೆಲಗಳಲ್ಲೂ ಭೂ ಸ್ವಾಧೀನಪಡಿಸಿಕೊಂಡು ಅಲ್ಲಲ್ಲಿ ಎಸ್ಟಿಪಿ ಸ್ಥಾಪಿಸಿ, ಕೆರೆಗಳಿಗೆ ಶುದ್ಧೀಕರಿಸಿದ ನೀರು ಬಿಡುವಂತೆ ಯೋಜನೆ ರೂಪಿಸಲು ಇಂಜಿನಿಯರುಗಳಿಗೆ ಸೂಚಿಸಿದರು.ಕಳಪೆ ಕಾಮಗಾರಿ ಮಾಡಿರುವ ಹಾಗೂ ನಿಯಮ ಉಲ್ಲಂಘಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸ್ಥಳೀಯ ಶಾಸಕರು, ಬೆಂಗಳೂರು ಜಲಮಂಡಳಿ ಮತ್ತು ಮಹಾನಗರಪಾಲಿಕೆ ಅಧಿಕಾರಿಗಳು
ಸಚಿವರೊಡನೆ ಸ್ಥಳ ವೀಕ್ಷಣೆ ಸಮಯದಲ್ಲಿ ಹಾಜರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications