ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿ ಜಿಲ್ಲೆಯಲ್ಲಿ ಕುಟುಂಬ ನ್ಯಾಯಾಲಯ: ಮೊಯ್ಲಿ

By Staff
|
Google Oneindia Kannada News

ಧಾರವಾಡ, ಜು.5: ನ್ಯಾಯಾಂಗ ವ್ಯವಸ್ಥೆ ಸುಧಾರಣೆಯತ್ತ ಕೇಂದ್ರ ಸರಕಾರ ದಾಪುಗಾಲು ಇಟ್ಟಿದೆ. ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರು.962 ಕೋಟಿ ತೆಗೆದಿರಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ಧಾರವಾಡ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವದಲ್ಲಿ ಉದ್ಟಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮೊಯ್ಲಿ ಮಾತನಾಡುತ್ತಿದ್ದರು. ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಿಂದ ನ್ಯಾಯಾಲಯಗಳ ಮೇಲಿ ಹೊರೆ ಕಡಿಮೆಯಾಗಲಿದೆ ಎಂದರು.

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರಾಜ್ಯ ಸರಕಾರದ ಸಹಕಾರ ಅಗತ್ಯ. ಈ ಸಂಬಂಧ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲಾಗುತ್ತದೆ . ಪ್ರತಿ ಜಿಲ್ಲೆಯಲ್ಲಿ ಕುಟುಂಬ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದ್ದು, 200 ನ್ಯಾಯಾಲಗಳ ಸ್ಥಾಪನೆಗೆ ಒಪ್ಪಿಗೆ ದೊರಕಿದೆ ಎಂದು ಮೊಯ್ಲಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X