ಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ

ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮೂರು ಬಾರಿ ರೈಲ್ವೆ ಸಚಿವರನ್ನು ಭೇಟಿ ಮಾಡಿದ್ದೆ. ಮನವಿಗಳನ್ನೂ ಸಲ್ಲಿಸಿದ್ದೆ. ಇದರ ಪರಿಣಾಮವಾಗಿ ಶಿವಮೊಗ್ಗ-ಬೆಂಗಳೂರು ಇಂಟರ್ಸಿಟಿ ರೈಲು ಹಾಗೂ ಶಿವಮೊಗ್ಗ-ಹರಿಹರ ಹೊಸ ಮಾರ್ಗದ ಸರ್ವೇ ಕುರಿತು ಬಜೆಟ್ನಲ್ಲಿ ಭರವಸೆ ಸಿಕ್ಕಿದೆ. ಮುಂದಿನ ಒಂದುವರೆ ತಿಂಗಳುಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್ಸಿಟಿ ರೈಲಿನ ಉದ್ಘಾಟನೆಯನ್ನು ಸಚಿವ ಮುನಿಯಪ್ಪರವರಿಂದ ಕೈಗೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂದು ವಿವರಿಸಿದರು.
ಶಿವಮೊಗ್ಗ-ಹರಿಹರ ರೈಲ್ವೆ ಹೊಸ ಮಾರ್ಗ ಮುಂದಿನ ಒಂದು ವರ್ಷದಲ್ಲಿ ಸರ್ವೇ ಪೂರ್ಣಗೊಳಿಸಲು ಸಚಿವರೊಂದಿಗೆ ಮಾತುಕತೆ ನಡೆಸಿದ್ದೇನೆ. ಈ ವರ್ಷದಲ್ಲಿ ಸರ್ವೇ ಮುಗಿದರೆ, ಮುಂದಿನ ಬಜೆಟ್ನಲ್ಲಿ ಈ ಮಾರ್ಗದ ನಿರ್ಮಾಣಕ್ಕೆ ಬಜೆಟ್ನಲ್ಲಿ ಹಣ ಬಿಡುಗಡೆಗೊಳಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ ರಾಘವೇಂದ್ರ, ಮುಂದಿನ ಬಾರಿಯಾದರೂ ತಾಳಗುಪ್ಪ-ಹೊನ್ನಾವರದ ಮೂಲಕ ಕೊಂಕಣ ರೈಲ್ವೆಗೆ ಮಲೆನಾಡನ್ನು ಜೋಡಿಸುವ ಪ್ರಾಮಾಣಿಕ ಪ್ರಯತ್ನ ನನ್ನದು. ಈ ಯೋಜನೆ ಅಂದಾಜು 800 ಕೋಟಿ ರೂ.ಗಳು ಖರ್ಚಾಗಲಿದ್ದು, ರಾಜ್ಯಕ್ಕೆ ಕೇಂದ್ರದ ರೈಲ್ವೆ ಬಜೆಟ್ನಲ್ಲಿ ಈ ವರ್ಷ ದಕ್ಕಿರುವುದೇ ಕೇವಲ 850 ಕೋಟಿ ರೂ.ಗಳು ಎಂದರು.
ಕೊಂಕಣ ರೈಲ್ವೆಗೆ ಮಲೆನಾಡಿನ ರೈಲು ಮಾರ್ಗವನ್ನು ಜೋಡಿಸುವ ಪ್ರಯತ್ನಕ್ಕಿಂತ ಮುಂಚೆ ಈ ದಾರಿಯಲ್ಲಿ ಬರುವ ಅರಣ್ಯದ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಈ ಬಗ್ಗೆ ಕೇಂದ್ರದ ಸಚಿವ ಜಯರಾಂ ರಮೇಶ್ರವರೊಂದಿಗೆ ಮಾತುಕತೆ ಮಾಡಿದ್ದೇನೆ. ಸಮಸ್ಯೆ ಬಗೆಹರಿಸುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಿರೀಶ್ ಪಟೇಲ್, ನಗರಸಭೆ ಅಧ್ಯಕ್ಷ ಎನ್.ಜೆ.ರಾಜಶೇಖರ್, ಬಿಜೆಪಿ ಮುಖಂಡರಾದ ಎಸ್.ಎಸ್.ಜ್ಯೋತಿಪ್ರಕಾಶ್, ಎಸ್.ದತ್ತಾತ್ರಿ, ಅನಂತರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications