ಎಚ್.ಕೆ. ಜಂಕ್ಷನ್ನಲ್ಲಿ ಜಾರುಬಂಡೆಯಾಗಿರುವ ರಸ್ತೆಗಳು!

ಕಳೆದ ಹಲವು ತಿಂಗಳಿನಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಆ ಮಾರ್ಗದ ರಂಗನಾಥಪುರದಿಂದ ಲಕ್ಕಿನಕೊಪ್ಪತನಕ ಸುಮಾರು 5 ಕಿ.ಮೀ. ರಸ್ತೆ ಅಗೆದು ಮಣ್ಣನ್ನು ಹಾಕಿರುವ ಕಾರಣ ವಾಹನ ಸಂಚರಿಸಲು ಹರಸಾಹಸ ಪಡಬೇಕಾದ ವಾತಾವರಣ ಏರ್ಪಟ್ಟಿದೆ. ಬೆಳಗಿನ ಜಾವದಿಂದಲೇ ಬಸ್ ಮಾಲೀಕರು ಪ್ರತಿಭಟನೆ ನಡೆಸಿದ್ದರಿಂದ ಆ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು, ಕುವೆಂಪು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಹಾಗೂ ನೌಕರರು ತೊಂದರೆ ಅನುಭವಿಸಬೇಕಾಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಸ್ ಮಾಲೀಕರಾದ ಸತೀಶ್ ಗೌಡ ಮಾತನಾಡಿ, ದಿನನಿತ್ಯ ನಗರದಿಂದ ಕುವೆಂಪು ವಿವಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿರುತ್ತಾರೆ. ಹಾಗೆಯೇ ಸ್ಥಳೀಯರು ಕೆಲಸ ಕಾರ್ಯಗಳಿಗಾಗಿ ನಗರಕ್ಕೆ ಬರಬೇಕಾಗಿದ್ದು, ರಸ್ತೆ ಸಂಪೂರ್ಣ ಹಾಳಾಗಿದ್ದರಿಂದ ಈ ಭಾಗದಲ್ಲಿ ಓಡಾಡಲು ಸಾಧ್ಯವಿಲ್ಲದಂತಾಗಿದೆ ಎಂದರು.
ರಸ್ತೆಯನ್ನು ಅಗೆದು ಮಣ್ಣನ್ನು ಹಾಕಿರುವುದರಿಂದ ಹಾಗೂ ಮಳೆ ಹೆಚ್ಚಾಗಿರುವ ಕಾರಣ ರಸ್ತೆ ಪೂರ್ಣವಾಗಿ ಕೆಸರುಮಯವಾಗಿದ್ದು, ದಿನನಿತ್ಯ ವಾಹನ ಸವಾರರು ಅಪಘಾತ ಮಾಡಿಕೊಂಡು ಆಸ್ಪತ್ರೆ ಸೇರುತ್ತಿರುವುದು ಸಾಮಾನ್ಯವಾಗಿದೆ. ಬಸ್ಸುಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕಾಮಗಾರಿಯೂ ಕಳಪೆಯಾಗಿದೆ. ಬೆಳಗ್ಗಿನಿಂದಲೇ ಪ್ರತಿಭಟನೆ ನಡೆಸಿದರೂ ಯಾವೊಬ್ಬ ಅಧಿಕಾರಿಯೂ, ಗುತ್ತಿಗೆದಾರರು ಇತ್ತ ಸುಳಿಯದೇ ನಿರ್ಲಕ್ಷ್ಯ ತೋರಿರುವುದರಿಂದ ಅವರ ವಿರುದ್ಧ ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕೆಂದರಲ್ಲದೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದರು.
ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕೂಡಲೇ ಮುಖ್ಯಮಂತ್ರಿಗಳು, ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳು ಗಮನಹರಿಸಿ, ಆಗಿರುವ ಸಮಸ್ಯೆಯನ್ನು ಬಗೆಹರಿಸಬೇಕೆಂದು ಮನವಿ ಮಾಡಿದರು. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಬಸ್ ಚಾಲಕ ಭೈರೇಶ್ ಮಾತನಾಡಿ, ರಸ್ತೆಯು ಸಂಪೂರ್ಣ ಕೆಸರಿನಿಂದ ಕೂಡಿದ್ದು, ಬಸ್ಸನ್ನು ಓಡಿಸುವುದು ಕಷ್ಟವಾಗಿದೆ. ಸ್ವಲ್ಪ ಹೆಚ್ಚೂ ಕಡಿಮೆ ಆದರೆ ಅಪಘಾತ ಸಂಭವಿಸುವುದು ಗ್ಯಾರಂಟಿ. ಅಪಘಾತವಾದರೆ ನಾವೇ ಜವಾಬ್ದಾರರಾಗಬೇಕೆ ಹೊರತು, ಬೇರೆ ಯಾರನ್ನು ದೂರುವಂತಿಲ್ಲ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ವಾಹನಗಳನ್ನು ಇಲ್ಲಿಂದ ತೆಗೆಯುವುದಿಲ್ಲ ಎಂದರು. ಪ್ರತಿಭಟನೆಯಲ್ಲಿ ಬಸ್ ಮಾಲೀಕರಾದ ಬಿ.ಆರ್.ಪಿ.ಗಿರೀಶ್, ಬಿ.ಆರ್.ಪಿ.ಪ್ರಕಾಶ್, ಚಂದ್ರಣ್ಣ ಸೇರಿದಂತೆ ಸ್ಥಳೀಯ ಜನರು ಉಪಸ್ಥಿತರಿದ್ದರು.
-
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ












Click it and Unblock the Notifications