ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ

By Staff
|
Google Oneindia Kannada News

Veerappa Moily
ಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು.

ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ ಹೈಕೋರ್ಟ್ ಸಂಚಾರಿ ಪೀಠವನ್ನು ಪೂರ್ಣ ಪ್ರಮಾಣದ ಪೀಠಗಳನ್ನಾಗಿ ಪರಿವರ್ತಿಸಲು ಪ್ರಸ್ತಾವನೆ ಬಂದರೆ ಮಂಜೂರು ಮಾಡಲು ಎಲ್ಲ ಪ್ರಯತ್ನ ಮಾಡಲಾಗುವುದು ಎಂದರು. ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನದ 371 ನೇ ಕಲಂ ತಿದ್ದುಪಡಿ ವಿಷಯ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಮೊಯ್ಲಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X