ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಪ್ರಕರಣ ವಜಾ

HD Kumaraswamy
ಗುಲ್ಬರ್ಗಾ, ಜು. 7 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಗ್ರಂಥಾಲಯ ಖಾತೆ ಸಚಿವ ಶಿವನಗೌಡ ನಾಯಕ ಅವರ ಮೇಲಿದ್ದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ವಜಾಗೊಳಿಸಿದೆ.

ಮಂಗಳವಾರ ವಿಚಾರಣೆ ನಡೆಸಿದ ಸಂಚಾರಿ ಪೀಠದ ನ್ಯಾಯಮೂರ್ತಿ ಜಗನ್ನಾಥ್ ರಾವ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸುವುದಾಗಿ ತಿಳಿಸಿದ್ದಾರೆ.

2008ರಲ್ಲಿ ನಡೆದ ದೇವದುರ್ಗ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಶಿವನಗೌಡ ನಾಯಕ್ ಅವರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿತ್ತು. ಶಿವನಗೌಡ ನಾಯಕ್ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು, ನಂತರ ಬಗಲಾದ ರಾಜಕೀಯ ಸನ್ನಿವೇಶದಲ್ಲಿ ಶಿವನಗೌಡ ನಾಯಕ್, ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿಕೊಂಡು ಮತ್ತೊಮ್ಮೆ ದೇವದುರ್ಗದಿಂದಲೇ ಸ್ಪರ್ಧಿಸಿ ಜಯಭೇರಿ ಬಾರಿಸಿ ಸಚಿವರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+