ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಪ್ರಕರಣ ವಜಾ

By Staff
|
Google Oneindia Kannada News

HD Kumaraswamy
ಗುಲ್ಬರ್ಗಾ, ಜು. 7 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಗ್ರಂಥಾಲಯ ಖಾತೆ ಸಚಿವ ಶಿವನಗೌಡ ನಾಯಕ ಅವರ ಮೇಲಿದ್ದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ವಜಾಗೊಳಿಸಿದೆ.

ಮಂಗಳವಾರ ವಿಚಾರಣೆ ನಡೆಸಿದ ಸಂಚಾರಿ ಪೀಠದ ನ್ಯಾಯಮೂರ್ತಿ ಜಗನ್ನಾಥ್ ರಾವ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸುವುದಾಗಿ ತಿಳಿಸಿದ್ದಾರೆ.

2008ರಲ್ಲಿ ನಡೆದ ದೇವದುರ್ಗ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಶಿವನಗೌಡ ನಾಯಕ್ ಅವರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿತ್ತು. ಶಿವನಗೌಡ ನಾಯಕ್ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು, ನಂತರ ಬಗಲಾದ ರಾಜಕೀಯ ಸನ್ನಿವೇಶದಲ್ಲಿ ಶಿವನಗೌಡ ನಾಯಕ್, ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿಕೊಂಡು ಮತ್ತೊಮ್ಮೆ ದೇವದುರ್ಗದಿಂದಲೇ ಸ್ಪರ್ಧಿಸಿ ಜಯಭೇರಿ ಬಾರಿಸಿ ಸಚಿವರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X