ವರುಣ್ ಗಾಂಧಿಗೆ ಝಡ್ ಪ್ಲಸ್ ಭದ್ರತೆ
ಇತ್ತೀಚೆಗೆ ದೆಹಲಿಯಲ್ಲಿ ಛೋಟಾ ಶಕೀಲ್ ನ ಆರು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದರು. ಭೂಗತ ವ್ಯಕ್ತಿಗಳು ನನ್ನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದು, ಕೂಡಲೇ ನನಗೆ ಹೆಚ್ಚಿನ ಭದ್ರತೆಯನ್ನು ನೀಡಬೇಕು ಎಂದು ಸಂಸದ ವರುಣ್ ಗಾಂಧಿ ಸರಕಾರವನ್ನು ಒತ್ತಾಯಿಸಿದ್ದರು. ಆದರೆ, ಸರಕಾರ ಇವರ ಮನವಿಗೆ ಸೂಕ್ತವಾಗಿ ಸ್ಪಂದಿಸಿರಲಿಲ್ಲ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಸಂಸದೆ ಮನೇಕಾ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಲೋಕಸಭೆ ವಿರೋಧ ಪಕ್ಷದ ಉಪನಾಯಕಿ ಸುಷ್ಮಾ ಸ್ವರಾಜ್, ಸರಕಾರದ ಮೇಲೆ ತೀವ್ರ ಒತ್ತಡ ಹೇರಿ ವರುಣ್ ಗಾಂಧಿ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಬೇಕು ಎಂದು ಆಗ್ರಹಿಸಿದ್ದರು. ಒತ್ತಡಕ್ಕೆ ಮಣಿದ ಸರಕಾರ ವರುಣ್ ಗೆ ಝಡ್ ಪ್ಲಸ್ ಭದ್ರತೆ ನೀಡಿ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆ ಸಮಯದಲ್ಲಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಬಾರಿ ವಿವಾದಕ್ಕೆ ಕಾರಣವಾಗಿತ್ತು. ಇದರಿಂದ ಭೂಗತ ವ್ಯಕ್ತಿಗಳು ವರುಣ್ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಅವರು ಹೆಚ್ಚಿನ ಭದ್ರತೆಬೇಕು ಎಂದು ಸರಕಾರಕ್ಕೆ ಮನವಿ ಮಾಡಿಕೊಂಡಿದ್ದರು.
(ಏಜನ್ಸೀಸ್)