ನಾಳೆಯಿಂದ ಮೂರು ದಿನ ಅಧಿವೇಶನ

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬಿಜೆಪಿ, ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಅಧಿವೇಶನ ಕರೆದಿದೆ. ಲೋಕಸಭೆ ಚುನಾವಣೆಯಲ್ಲಿ ಗುಲ್ಬರ್ಗಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಮಲ್ಲಿಕಾರ್ಜುನ ಖರ್ಗೆ ಹೊಂದಿರುವ ಸ್ಥಾನಕ್ಕೆ ಇದೀಗ ಸಿದ್ದರಾಮಯ್ಯ ಬಂದು ಕುಳಿತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ವಿದ್ಯುತ್, ಪಡಿತರ ಚೀಟಿಯಲ್ಲಿ ಅವ್ಯವಸ್ಥೆ, ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಆಗಿರುವ ಗೊಂದಲ, ದೂರಶಿಕ್ಷಣ ವಿಭಾಗದ ಪರೀಕ್ಷೆಯಲ್ಲಿ ಆಗುತ್ತಿರುವ ಗೋಲ್ ಮಾಲ್ ಗಳು ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿರುವ ಬಜೆಟ್ ನಲ್ಲಿ ನೀಡಿರುವ ಅನೇಕ ಅಶ್ವಾಸನೆಗಳಲ್ಲಿ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಕುರಿತು ಚರ್ಚೆ ನಡೆಯಲಿವೆ. ಇತ್ತೀಚೆಗೆ ತುಮಕೂರು ರಸ್ತೆಯಲ್ಲಿರುವ ಗೋಲ್ಡನ್ ಪಾಮ್ಸ್ ರೆಸಾರ್ಟ್ ನಲ್ಲಿ ಸರಕಾರದ ನಡೆಸಿದ ಮಂಥನ-2 ಸಭೆಗೆ ಸಂಬಂಧಿಸಿದಂತೆ ಸದನದಲ್ಲಿ ತೀವ್ರ ಚರ್ಚೆ, ವಾಗ್ವಾದ ನಡೆಯುವ ಸೂಚನೆಗಳಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications