ರಾಜ್ಯದ ವಿಮಾನನಿಲ್ದಾಣ ಕಾಮಗಾರಿ ಗುತ್ತಿಗೆ ಮೇತಾಸ್ ಗೆ
ಮುಂಬೈ, ಜು. 8 : ಸತ್ಯಂ ಸಂಸ್ಥಾಪಕ ರಾಮಲಿಂಗರಾಜು ಕುಟುಂಬ ಮಾಲೀಕತ್ವದ ಮೇತಾಸ್ ಇನ್ಫ್ರಾ ಮೇಲೆ ಕರ್ನಾಟಕ ಸರಕಾರಕ್ಕೆ ಎಲ್ಲಿಲ್ಲದ ನಂಬಿಕೆ. ಸತ್ಯಂ ಕಂಪ್ಯೂಟರ್ ಕಂಪನಿಯಲ್ಲಿ ಅವ್ಯವಹಾರ ನಡೆಸಿ ನಂಬಿಕೆ ಕಳೆದುಕೊಂಡಿರುವ ರಾಜು ಕುಟುಂಬದ ಮೇತಾಸ್ ಸಂಸ್ಥೆಗೆ ಗುಲ್ಬರ್ಗ ಮತ್ತು ಶಿವಮೊಗ್ಗ ವಿಮಾನನಿಲ್ದಾಣದ ಕಾಮಗಾರಿ ಗುತ್ತಿಗೆಯನ್ನು ನೀಡಿದೆ.
ಮುಂಬೈ ಷೇರು ವಿನಿಮಯ ಕಚೇರಿಗೆ ಸಲ್ಲಿಸಿದ್ದ ಹೇಳಿಕೆಯಲ್ಲಿ ಸ್ವತಃ ಮೇತಾಸ್ ಈ ವಿಷಯವನ್ನು ಖಚಿತಪಡಿಸಿದೆ. ಸಂಸ್ಥೆಯ ಸ್ಥಿತಿ ಮತ್ತು ವಿಶ್ವಾಸಾರ್ಹತೆ ಬಗ್ಗೆ ಕರ್ನಾಟಕ ಸರಕಾರಕ್ಕಿದ್ದ ಅಪನಂಬಿಕೆಯನ್ನು ಹೊಸದಾಗಿ ರಚಿತಗೊಂಡಿರುವ ಸಂಸ್ಥೆಯ ಆಡಳಿತ ಮಂಡಳಿ ಬಗೆಹರಿಸಿದೆ. ಆದುದರಿಂದ ಕರ್ನಾಟಕ ಸರಕಾರ ನಮ್ಮ ಸಂಸ್ಥೆಯ ಜೊತೆಗೆ ವ್ಯವಹಾರ ಮುಂದುವರಿಸಲು ನಿರ್ಧರಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಚಂದ್ರಶೀಲ ಬನ್ಸಾಲ್ ತಿಳಿಸಿದ್ದಾರೆ.
ಆದರೆ, ಇತ್ತ ಆಂಧ್ರಪ್ರದೇಶ ಸರಕಾರ ಮಾತ್ರ ಮೇತಾಸ್ ಬಗ್ಗೆ ವಿಶ್ವಾಸ ಕಳೆದುಕೊಂಡಿದೆ. ಯೋಜನೆಯನ್ನು ಸಂಪೂರ್ಣಗೊಳಿಸುವ ಸಂಸ್ಥೆಯ ಹಣಕಾಸು ಸಾಮರ್ಥ್ಯವನ್ನು ಜುಲೈ 6 ರ ಒಳಗೆ ಸಾಬೀತುಪಡಿಸಬೇಕೆಂದು ಗಡುವು ನೀಡಿತ್ತು. ಆದರೆ ಈ ದಿನಾಂಕದ ಒಳಗೆ ಸಾಬೀತುಪಡಿಸಲು ವಿಫಲವಾಗಿರುವ ಮೇತಾಸ್ ಸಂಸ್ಥೆಗೆ ಮೆಟ್ರೋ ಗುತ್ತಿಗೆಯನ್ನು ರದ್ದು ಪಡಿಸಿರುವುದಾಗಿ ಸರಕಾರ ಹೇಳಿಕೆ ನೀಡಿದೆ.
(ಏಜನ್ಸೀಸ್)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications