ಅಣ್ಣೀಗೇರಿ : ಸಾಲದ ಸುಳಿಯಲ್ಲಿ ಕೃಷಿ ವಿಜ್ಞಾನಿ
ಹುಬ್ಬಳ್ಳಿ, ಜು. 9 : ರಾಷ್ಟ್ರಪತಿ ಡಾ ಅಬ್ದುಲ್ ಕಲಾ ಅವರಿಂದ ರಾಷ್ಟ್ರೀಯ ಕೃಷಿ ವಿಜ್ಞಾನಿ ಎಂಬ ಪ್ರಶಸ್ತಿ ಪಡೆದುಕೊಂಡಿದ್ದ ಕೃಷಿ ವಿಜ್ಞಾನಿ ಅಬ್ದುಲ್ ಖಾದರ್ ರೈತರಿಗೆ ಉಪಯೋಗವಾಗುವಂತ ಪ್ರಯೋಗ ಮಾಡಿದ ಅವರು ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದು ಕರುಣಾಜನಕ ಸ್ಥಿತಿಯಲ್ಲಿದ್ದಾರೆ.
ಗದಗ ಜಿಲ್ಲೆಯ ಅಣ್ಣಿಗೇರಿ ಹೋಬಳಿಯವರಾದ ಅಬ್ದುಲ್ ಖಾದರ್ ಅವರು ಪದವೀಧರರಾಗಿಲ್ಲದಿದ್ದರೂ ಅಸಾಮಾನ್ಯ ಪ್ರತಿಭಾವಂತರು. ತಮ್ಮ ಜಾಣ್ಮೆಯಿಂದಲೇ ಅವರು ಕೃಷಿ ಕ್ಷೇತ್ರದಲ್ಲಿ ಉತ್ತಮ ಕೃಷಿ ಮಾಡಿದ್ದರು. ಬಿತ್ತನೆಗೆ ಸಂಬಂಧಿಸಿದಂತೆ ನೂತನ ಮಷೀನ್ ತಯಾರಿಸಿ ಅಂದಿನ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಿಂದ ರಾಷ್ಟ್ರೀಯ ಕೃಷಿ ವಿಜ್ಞಾನಿ ಪ್ರಶಸ್ತಿಯ ಗೌರವವಕ್ಕೂ ಪಾತ್ರರಾದರು.
ಹೀಗೆ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಖಾದರ್ ಅವರು, ಅದಕ್ಕೆ ಬೇಕಿರುವ ಅಗತ್ಯತೆಗಳ ಸಲುವಾಗಿ ಸಾಲದ ಮೋರೆಗೆ ಹೋದರು. ಇದೀಗ ಅವರ ಸಾಲದ ಮೊತ್ತ 16 ಲಕ್ಷಕ್ಕೆ ಏರಿದೆ. ಉಪಜೀವನಕ್ಕೆ ಇರುವ ಜಮೀನು ಮನೆಯಲ್ಲಿ ಸಾಲ ಕೊಟ್ಟ ಬ್ಯಾಂಕ್ ಗಳು ಹರಾಜು ಹಾಕಲು ಮುಂದಾಗಿವೆ. ಕೈಯಲ್ಲಿ ಕಾಸಿಲ್ಲಿದ ಖಾದರ್ ಅವರು ಮಂದೇನು ಎಂಬ ದೊಡ್ಡ ಚಿಂತೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಜಮೀನು. ಮನೆಗಳನ್ನು ಸರಕಾರ ಮುಟ್ಟುಗೋಲು ಹಾಕಿಕೊಂಡರೆ ಕುಟುಂಬ ಬೀದಿಗೆ ಬರಲಿದೆ ಎಂದ ಖಾದರ್ ಅವರ ಕಣ್ಣಿರು ತಗೆಯುತ್ತಾರೆ.
ಈ ಸಾಲ ನಿನ್ನೆ ಮೊನ್ನೆಯದಲ್ಲ. ಕಳೆದ ಅನೇಕ ವರ್ಷಗಳಿಂದ ಮಾಡಿರುವ ಸಾಲ ಇದಾಗಿದೆ. ಸ್ವಂತಕ್ಕಾಗಿ ನಾನು ಈ ಸಾಲ ಮಾಡಿಕೊಂಡಿಲ್ಲ. ರೈತರಿಗೆ ಉಪಯೋಗವಾಗಲಿ ಎಂಬ ಕಾರಣದಿಂದ ಈ ಸಾಲ ಮಾಡಿರುವೆ. ಆದ್ದರಿಂದ ಸರಕಾರ ನನ್ನ ಹಾಗೂ ಕುಟುಂಬವನ್ನು ಸಾಲದಿಂದ ಮುಕ್ತ ಮಾಡಬೇಕು ಎಂದು ಬೇಡಿಕೊಳ್ಳುತ್ತಿದ್ದಾನೆ. ಧರಂಸಿಂಗ್, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಇದ್ದಾಗ ಈ ಬಗ್ಗೆ ಅವರ ಗಮನಕ್ಕೆ ತರಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ. ಯಡಿಯೂರಪ್ಪ ಅವರು ನನಗೆ ಸಹಾಯ ಮಾಡಬೇಕು. ಹರಾಜು ಪ್ರಕ್ರಿಯೆಯನ್ನು ನಿಲ್ಲಿಸಲು ಸೂಚನೆ ನೀಡಬೇಕು ಎಂದು ಅವರು ಅಂಗಲಾಚುತ್ತಿದ್ದಾರೆ.
(ಏಜನ್ಸೀಸ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications