ಕರಾವಳಿ ಮತ್ತು ಮಲೆನಾಡಿನಲ್ಲಿ ನಿಲ್ಲದ ಜಡಿ ಮಳೆ
ಬೆಂಗಳೂರು, ಜು.9: ಕರಾವಳಿ ಮತ್ತು ಮಲೆನಾಡಿನಲ್ಲಿ ಜಡಿ ಮಳೆ ಬುಧವಾರವೂ ಮುಂದುವರಿದಿದ್ದು ಮಳೆ ಸಂಬಂಧಿ ಅನಾಹುತಕ್ಕೆ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗದ ತಲಾ ಒಬ್ಬರು ಸಾವಪ್ಪಿದ್ದಾರೆ.
ಮಳೆಯ ಕಾರಣ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ರಜೆಯನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಉತ್ತರ ಕನ್ನಡ ವಿವಿಧೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಪುತ್ತೂರು, ಸುಬ್ರಹ್ಮಣ್ಯ, ಸುಳ್ಯ, ಉಪ್ಪಿನಂಗಡಿ ಪ್ರದೇಶಗಳಲ್ಲೂ ಭಾರಿ ಮಳೆ ಸುರಿದಿದೆ.
ದಕ್ಷಿಣ ಕನ್ನಡದ ಹಲವೆಡೆ ಕೃತಕ ನೆರೆಯ ಪರಿಣಾಮ ಭಾರಿ ನಷ್ಟವಾಗಿದೆ. ತಗ್ಗು ಪ್ರದೇಶಗಳು ಪೂರ್ಣ ಜಲಾವೃತವಾಗಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಸರಾಸರಿ 103.8 ಸೆ.ಮೀ ಮಳೆಯಾಗಿದೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications