ರಾಜ್ಯಸಭಾ ಸದಸ್ಯತ್ವಕ್ಕೆ ಕಸ್ತೂರಿರಂಗನ್ ರಾಜೀನಾಮೆ
ನವದೆಹಲಿ, ಜು. 9 : ಇಸ್ರೋದ ಖ್ಯಾತ ವಿಜ್ಞಾನಿ ಡಾ ಕೆ ಕಸ್ತೂರಿ ರಂಗನ್ ಅವರು ಬುಧವಾರ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯೋಜನಾ ಆಯೋಗದ ಸದಸ್ಯರಾಗಿ ನೇಮಕಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಾಮನಿರ್ದೇಶಿತ ಸದಸ್ಯ ಕಸ್ತೂರಿರಂಗನ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ರಾಜ್ಯಸಭಾ ಉಪಾಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಹೇಳಿದ್ದಾರೆ. 2003ರ ಅಗಸ್ಟ್ 3 ರಂದು ಅವರು ಮೇಲ್ಮನೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದರು. ಕಸ್ತೂರಿರಂಗನ್ ಅವರು ರಾಜ್ಯಸಭೆಗೆ ಮೊದಲು ರಾಜೀನಾಮೆ ನೀಡದೆ ಯೋಜನೆ ಆಯೋಗದ ಸದಸ್ಯರಾಗಿ ನೇಮಕಗೊಳ್ಳಲು ಸಾಧ್ಯವಿಲ್ಲ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೋಂಟೆಕ್ ಸಿಂಗ್ ಅಹ್ಲುವಾಲಿಯಾ ತಿಳಿಸಿದ್ದರು.
(ಏಜನ್ಸೀಸ್)












Click it and Unblock the Notifications