ಮೈಸೂರಿನಲ್ಲಿ ಕೋಮುದುಷ್ಟ ಶಕ್ತಿಗಳಿಗೆ ಮಟ್ಟ

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಯಿಂದ ಗಾಯಗೊಂಡವರನ್ನು ಭೇಟಿ ಮಾಡಲು ನಗರದ ಅಪೋಲೋ ಆಸ್ಪತ್ರೆ, ಕೃಷ್ಣರಾಜೇಂದ್ರ ಆಸ್ಪತ್ರೆ, ವಿಕ್ರಂ ಆಸ್ಪತ್ರೆ ಹಾಗೂ ಬೀಬಿ ಆಯಿಷ ಆಸ್ಪತ್ರೆಗಳಿಗೆ ಅವರು ಬುಧವಾರ ಭೇಟಿ ನೀಡಿ ಸುದ್ದಿಗಾರರ ಜತೆ ಮಾತನಾಡಿದರು.
ಇತ್ತೀಚೆಗೆ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋಮು ಗಲಭೆ ನಡೆದಿತ್ತು. ಆ ವೇಳೆಯಲ್ಲಿ ಚುನಾವಣೆ ಇದ್ದರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿತ್ತು. ಎರಡನೇ ಬಾರಿ ಪ್ರಕರಣ ಮರುಕಳಿಸಿದೆ. ಕೋಮು ಗಲಭೆಗಳನ್ನು ಸೃಷ್ಠಿ ಮಾಡಿದ್ದಾರೆ. ಈ ಗಲಭೆ ಹಿಂದಿರುವ ಶಕ್ತಿಗಳನ್ನು ಸರ್ಕಾರ ಯಾವುದೇ ಮುಲಾಜಿಲ್ಲದೆ ಬಗ್ಗುಬಡಿಯಲಿದೆ ಎಂದು ಸಚಿವೆ ಕರಂದ್ಲಾಜೆ ಹೇಳಿದರು.
ಸರ್ಕಾರದ ಉದ್ದೇಶ ಸಾರ್ವಜನಿಕ ಶಾಂತಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು. ಇದಕ್ಕೆ ಧಕ್ಕೆ ತರುವ ಯತ್ನ ನಡೆದಿದೆ. ಈಗಿನ ಗಲಭೆಯಲ್ಲಿ ಮೂರು ಸಾವು ಸಂಭವಿಸಿದೆ. ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. 21 ಜನ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳು ಹಾಗೂ ಮೈಸೂರು ನಗರ ಪೋಲೀಸ್ ಆಯುಕ್ತರು ತ್ವರಿತವಾಗಿ ಕಠಿಣ ಕ್ರಮ ಕೈಗೊಂಡ ಫಲವಾಗಿ ಗಲಭೆ ನಿಯಂತ್ರಣ ಯಶಸ್ವಿಯಾಯಿತು ಎಂದು ಸಚಿವರು ಹೇಳಿದರು.
ತಾವು ಅಮೇರಿಕಾದ ಪ್ರವಾಸದಲ್ಲಿದ್ದರೂ ಜಿಲ್ಲಾಡಳಿತದ ಜೊತೆ ಸತತ ಸಂಪರ್ಕದಲ್ಲಿದ್ದು ಕಾಲಕಾಲಕ್ಕೆ ಪೂರ್ಣ ಮಾಹಿತಿ ದೊರಕುತ್ತಿತ್ತು. ವಿದೇಶದಿಂದಲೇ ಮೃತಪಟ್ಟವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದ್ದು ಈಗಾಗಲೇ ಪರಿಹಾರದ ಚೆಕ್ ನೀಡಲಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ. ಮುಖಂಡ ಗಿರಿಧರ್ ಗುಣಮುಖರಾಗುತ್ತಿದ್ದಾರೆ. ನಿನ್ನೆ ಬೆಂಗಳೂರಿನಿಂದ ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರ ತಂಡ ಮೈಸೂರಿಗೆ ಆಗಮಿಸಿ ಗಿರಿಧರ್ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಿತು. ಇಂದೂ ಸಹ ಚೆನ್ನೈನಿಂದ ತಜ್ಞ ವೈದ್ಯರು ಆಗಮಿಸಿ ಗಿರಿಧರ್ ಅವರ ಆರೋಗ್ಯ ತಪಾಸಣೆ ನಡೆಸಿದರು ಎಂದು ಸಚಿವೆ ಕುಮಾರಿ ಶೋಭ ಕರಂದ್ಲಾಜೆ ಹೇಳಿದರು.
ಈಗಾಗಲೇ ಘಟನಾ ಸ್ಥಳಗಳಿಗೆ ರಾಜ್ಯದ ಗೃಹ ಸಚಿವ ವಿ ಎಸ್ ಆಚಾರ್ಯ ಹಾಗೂ ರಾಜ್ಯ ಪೋಲೀಸ್ ಇಲಾಖೆ ಮುಖ್ಯಸ್ಥ ಡಿಜಿಪಿ ಶ್ರೀ ಅಜಯ್ ಕುಮಾರ್ ಸಿಂಗ್ ಭೇಟಿ ನೀಡಿ ಪೂರ್ಣ ಪರಿಶೀಲನೆ ನಡೆಸಿದ್ದಾರೆ. ಕಳೆದ ಬಾರಿ ಗಲಭೆಯಾದಾಗ ಹಾನಿಗೊಳಗಾದ ಪ್ರಾರ್ಥನಾ ಮಂದಿರಗಳಿಗೆ ಪರಿಹಾರ ನೀಡಿದೆ. ಅಲ್ಲದೆ ಹಾನಿಗೊಳಗಾದ 30 ಮನೆಗಳಿಗೆ ಪರಿಹಾರ ನೀಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ನಗರದ ಶಾಂತಿ, ಸೌಹಾರ್ದತೆ ಕಾಪಾಡುವಲ್ಲಿ ಜಿಲ್ಲಾಡಳಿತ ಹಾಗೂ ಪೋಲೀಸರಿಗೆ ನೆರವಾಗುವಂತೆ ಸಚಿವೆ ಶೋಭ ಕರಂದ್ಲಾಜೆ ಮನವಿ ಮಾಡಿದರು.
ಸಚಿವರೊಂದಿಗೆ ಮೈಸೂರು ನಗರದ ಪೋಲೀಸ್ ಆಯುಕ್ತ ಸುನೀಲ್ ಅಗರವಾಲ್, ಜಿಲ್ಲಾಧಿಕಾರಿ ಪಿ ಮಣಿವಣ್ಣನ್, ವಾರ್ತಾ ಇಲಾಖೆ ಉಪನಿರ್ದೇಶಕ ಎ ಆರ್ ಪ್ರಕಾಶ್ ಇದ್ದರು.
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications