ಮೈಸೂರಿನಲ್ಲಿ ಕೋಮುದುಷ್ಟ ಶಕ್ತಿಗಳಿಗೆ ಮಟ್ಟ

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಯಿಂದ ಗಾಯಗೊಂಡವರನ್ನು ಭೇಟಿ ಮಾಡಲು ನಗರದ ಅಪೋಲೋ ಆಸ್ಪತ್ರೆ, ಕೃಷ್ಣರಾಜೇಂದ್ರ ಆಸ್ಪತ್ರೆ, ವಿಕ್ರಂ ಆಸ್ಪತ್ರೆ ಹಾಗೂ ಬೀಬಿ ಆಯಿಷ ಆಸ್ಪತ್ರೆಗಳಿಗೆ ಅವರು ಬುಧವಾರ ಭೇಟಿ ನೀಡಿ ಸುದ್ದಿಗಾರರ ಜತೆ ಮಾತನಾಡಿದರು.
ಇತ್ತೀಚೆಗೆ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋಮು ಗಲಭೆ ನಡೆದಿತ್ತು. ಆ ವೇಳೆಯಲ್ಲಿ ಚುನಾವಣೆ ಇದ್ದರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿತ್ತು. ಎರಡನೇ ಬಾರಿ ಪ್ರಕರಣ ಮರುಕಳಿಸಿದೆ. ಕೋಮು ಗಲಭೆಗಳನ್ನು ಸೃಷ್ಠಿ ಮಾಡಿದ್ದಾರೆ. ಈ ಗಲಭೆ ಹಿಂದಿರುವ ಶಕ್ತಿಗಳನ್ನು ಸರ್ಕಾರ ಯಾವುದೇ ಮುಲಾಜಿಲ್ಲದೆ ಬಗ್ಗುಬಡಿಯಲಿದೆ ಎಂದು ಸಚಿವೆ ಕರಂದ್ಲಾಜೆ ಹೇಳಿದರು.
ಸರ್ಕಾರದ ಉದ್ದೇಶ ಸಾರ್ವಜನಿಕ ಶಾಂತಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು. ಇದಕ್ಕೆ ಧಕ್ಕೆ ತರುವ ಯತ್ನ ನಡೆದಿದೆ. ಈಗಿನ ಗಲಭೆಯಲ್ಲಿ ಮೂರು ಸಾವು ಸಂಭವಿಸಿದೆ. ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. 21 ಜನ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳು ಹಾಗೂ ಮೈಸೂರು ನಗರ ಪೋಲೀಸ್ ಆಯುಕ್ತರು ತ್ವರಿತವಾಗಿ ಕಠಿಣ ಕ್ರಮ ಕೈಗೊಂಡ ಫಲವಾಗಿ ಗಲಭೆ ನಿಯಂತ್ರಣ ಯಶಸ್ವಿಯಾಯಿತು ಎಂದು ಸಚಿವರು ಹೇಳಿದರು.
ತಾವು ಅಮೇರಿಕಾದ ಪ್ರವಾಸದಲ್ಲಿದ್ದರೂ ಜಿಲ್ಲಾಡಳಿತದ ಜೊತೆ ಸತತ ಸಂಪರ್ಕದಲ್ಲಿದ್ದು ಕಾಲಕಾಲಕ್ಕೆ ಪೂರ್ಣ ಮಾಹಿತಿ ದೊರಕುತ್ತಿತ್ತು. ವಿದೇಶದಿಂದಲೇ ಮೃತಪಟ್ಟವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದ್ದು ಈಗಾಗಲೇ ಪರಿಹಾರದ ಚೆಕ್ ನೀಡಲಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ. ಮುಖಂಡ ಗಿರಿಧರ್ ಗುಣಮುಖರಾಗುತ್ತಿದ್ದಾರೆ. ನಿನ್ನೆ ಬೆಂಗಳೂರಿನಿಂದ ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರ ತಂಡ ಮೈಸೂರಿಗೆ ಆಗಮಿಸಿ ಗಿರಿಧರ್ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಿತು. ಇಂದೂ ಸಹ ಚೆನ್ನೈನಿಂದ ತಜ್ಞ ವೈದ್ಯರು ಆಗಮಿಸಿ ಗಿರಿಧರ್ ಅವರ ಆರೋಗ್ಯ ತಪಾಸಣೆ ನಡೆಸಿದರು ಎಂದು ಸಚಿವೆ ಕುಮಾರಿ ಶೋಭ ಕರಂದ್ಲಾಜೆ ಹೇಳಿದರು.
ಈಗಾಗಲೇ ಘಟನಾ ಸ್ಥಳಗಳಿಗೆ ರಾಜ್ಯದ ಗೃಹ ಸಚಿವ ವಿ ಎಸ್ ಆಚಾರ್ಯ ಹಾಗೂ ರಾಜ್ಯ ಪೋಲೀಸ್ ಇಲಾಖೆ ಮುಖ್ಯಸ್ಥ ಡಿಜಿಪಿ ಶ್ರೀ ಅಜಯ್ ಕುಮಾರ್ ಸಿಂಗ್ ಭೇಟಿ ನೀಡಿ ಪೂರ್ಣ ಪರಿಶೀಲನೆ ನಡೆಸಿದ್ದಾರೆ. ಕಳೆದ ಬಾರಿ ಗಲಭೆಯಾದಾಗ ಹಾನಿಗೊಳಗಾದ ಪ್ರಾರ್ಥನಾ ಮಂದಿರಗಳಿಗೆ ಪರಿಹಾರ ನೀಡಿದೆ. ಅಲ್ಲದೆ ಹಾನಿಗೊಳಗಾದ 30 ಮನೆಗಳಿಗೆ ಪರಿಹಾರ ನೀಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ನಗರದ ಶಾಂತಿ, ಸೌಹಾರ್ದತೆ ಕಾಪಾಡುವಲ್ಲಿ ಜಿಲ್ಲಾಡಳಿತ ಹಾಗೂ ಪೋಲೀಸರಿಗೆ ನೆರವಾಗುವಂತೆ ಸಚಿವೆ ಶೋಭ ಕರಂದ್ಲಾಜೆ ಮನವಿ ಮಾಡಿದರು.
ಸಚಿವರೊಂದಿಗೆ ಮೈಸೂರು ನಗರದ ಪೋಲೀಸ್ ಆಯುಕ್ತ ಸುನೀಲ್ ಅಗರವಾಲ್, ಜಿಲ್ಲಾಧಿಕಾರಿ ಪಿ ಮಣಿವಣ್ಣನ್, ವಾರ್ತಾ ಇಲಾಖೆ ಉಪನಿರ್ದೇಶಕ ಎ ಆರ್ ಪ್ರಕಾಶ್ ಇದ್ದರು.
(ದಟ್ಸ್ ಕನ್ನಡ ವಾರ್ತೆ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications