ಗೋಹತ್ಯೆ ನಿಷೇಧಿಸಿ : ಬಾಲಗಂಗಾಧರ ಸ್ವಾಮೀಜಿ

ಕರ್ನಾಟಕದಲ್ಲಿ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ಅಧಿನಿಯಮ 1964 ರಲ್ಲಿನ ನ್ಯೂನತೆ ಸರಿಪಡಿಸಿ ಪೂರ್ಣ ಗೋಹತ್ಯೆ ಕಾಯ್ದೆ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ. ಗೋಹತ್ಯೆ ಮತೀಯ ಸಂಘರ್ಷಕ್ಕೆ ಕಾರಣವಾಗುತ್ತಿದೆ ಎಂಬುದು ಸಮಂಜಸವಲ್ಲ. ಗೋವುಗಳನ್ನು ರಕ್ಷಿಸುವುದು ಭಾರತದ ನೆಲಜಲ ಉಪಯೋಗಿಸುವ ಎಲ್ಲರ ಕರ್ತವ್ಯ.
ಸರಕಾರವು ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಜೊತೆಗೆ ಆಶಕ್ತ ಗೋಸಂತತಿಯ ಸಂರಕ್ಷಣೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಅವುಗಳ ರಕ್ಷಣೆಯಲ್ಲಿ ತೊಡಗುವ ಸಂಸ್ಥೆಗಳಿಗೆ ಸರಕಾರ ಅಗತ್ಯ ಸೌಲಭ್ಯ ನೀಡಬೇಕು ಎಂದು ಸ್ವಾಮೀಜಿಗಳು ಅಭಿಪ್ರಾಯಪಟ್ಟರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications