For Daily Alerts
ಮೈಸೂರು ಗಲಭೆ : ಪಿಎಫ್ ಡಿ ಸಂಘಟನೆ ನಿಷೇಧ
ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಸಂಘಟನೆಗಳು ನಿಷೇಧಿಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಆಚಾರ್ಯ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿ ಒಂದು ವರ್ಷವಾಗಿದೆ. ಹಲವು ಸಚಿವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವರ ಸಾಧನೆ ತೃಪ್ತಿಕರವಾಗಿಲ್ಲ. ಅಗಸ್ಟ್ 1 ಮತ್ತು 2 ರಂದು ನಡೆಯುವ ಪಕ್ಷದ ರಾಜ್ಯ ಕಾರ್ಯಕಾರಿಣಿಯಲ್ಲಿ ಅಂಥ ಸಚಿವರಿಗೆ ಸೂಚನೆ ನೀಡಲಾಗುತ್ತದೆ. ನಿಗಮ ಮಂಡಳಿ ಕುರಿತೂ ನಿರ್ಧರಿಸಲಾಗುತ್ತದೆ ಎಂದು ಸದಾನಂದಗೌಡ ಹೇಳಿದರು. ಇತ್ತೀಚೆಗೆ ನಡೆದ ಮೈಸೂರು ಗಲಭೆಯಲ್ಲಿ ಬಿಜೆಪಿ ಕಾರ್ಯಕರ್ತ ಗಿರಿಧರ್ ಗಾಯಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
Story first published: Friday, July 10, 2009, 12:10 [IST]