ವೈನ್ ನೀತಿ ತಿದ್ದುಪಡಿಗೆ ಸಹಕಾರ : ಉಮೇಶ್ ಕತ್ತಿ

ಕರ್ನಾಟಕ ದ್ರಾಕ್ಷಾರಸ ಮಂಡಳಿಯು ಲಾಲ್ಬಾಗ್ ಡಾ ಎಂ.ಹೆಚ್. ಮರೀಗೌಡ ಸಭಾಂಗಣದಲ್ಲಿ ಏರ್ಪಡಿಸಿದ್ದ ದ್ರಾಕ್ಷಾರಸ ಮೇಳ ಮತ್ತು ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಫಾಟಿಸಿ ಮಾತನಾಡುತ್ತಿದ್ದ ಅವರು, ವೈನ್ ನೀತಿಯ ಸರಳೀಕರಣದಿಂದಾಗಿ 600 ಎಕರೆ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದ ದ್ರಾಕ್ಷಿ ಬೆಳೆಯು 1800 ಎಕರೆಗೆ ವಿಸ್ತಾರಗೊಂಡಿರುವುದು ದ್ರಾಕ್ಷಿ ಬೆಳೆಗಾರರ ಉತ್ಸಾಹವನ್ನು ಹೆಚ್ಚಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ ಡಿ. ಹೇಮಚಂದ್ರಸಾಗರ್ ಅವರು ಮಾತನಾಡಿ, ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ದ್ರಾಕ್ಷಾರಸ ಮೇಳ ನಡೆಯುತ್ತಿರುವುದು ಸಂತೋಷದ ವಿಷಯ. ವೈನ್ ನೀತಿಯು ರೈತರಿಗೆ ಮತ್ತು ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ಮತ್ತು ಆದಾಯವನ್ನು ನೀಡುವಲ್ಲಿ ಸಹಕಾರಿಯಾಗಿದೆ ಎಂದರು.
ಅಪರ ಮುಖ್ಯ ಕಾರ್ಯದರ್ಶಿಗಳು, ಅಭಿವೃದ್ಧಿ ಆಯುಕ್ತರು ಮತ್ತು ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರಾದ ಡಾ ಎಲ್. ಶಾಂತಕುಮಾರಿ ಸುಂದರ್ ಅವರು, ಈ ಹಿಂದೆ ದ್ರಾಕ್ಷರಸ ಘಟಕಗಳನ್ನು ಸ್ಥಾಪಿಸಲು ಅಬಕಾರಿ ಆಯುಕ್ತರಿಂದ ಪಡೆಯಬೇಕಾಗಿದ್ದ ಪರವಾನಗಿಯನ್ನು ಈಗ ಜಿಲ್ಲಾಧಿಕಾರಿಗಳಿಂದಲೇ ಪಡೆಯುವಂತೆ ಸರಳೀಕರಿಸಲಾಗಿದೆ. ವೈನ್ ಟ್ಯಾವರಿನ್ ತೆರೆಯಲು ವಾರ್ಷಿಕ ರೂ 1000 ಶುಲ್ಕವನ್ನು ಬಿಗ್ಬಜಾರ್, ನಂತಹ ಮಾಲ್ಗಳಲ್ಲಿ ರೂ 5000 ಪರವಾನಗಿ ಶುಲ್ಕ ಪಾವತಿಸಿ ವೈನ್ ಮಾರಾಟ ಮಾಡಲು ಅನುವು ಮಾಡಿಕೊಡಲಾಗಿದೆ ಎಂದರು.
ಹಾಗೆಯೇ ಬಿಜಾಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ 140 ಎಕರೆ ಪ್ರದೇಶವನ್ನು ವೈನ್ಪಾರ್ಕ್ ಸ್ಥಾಪಿಸುವ ಉದ್ದೇಶದಿಂದ ಪಡೆಯಲಾಗಿದ್ದು, ಈ ವೈನ್ ಪಾರ್ಕ್ನಲ್ಲಿ ನಿರುದ್ಯೋಗಿಗಳಿಗೆ ವೈನ್ ತಯಾರಿಕೆಯ ಬಗ್ಗೆ 6 ತಿಂಗಳ ತರಬೇತಿಯನ್ನು ನೀಡುವ ಜೊತೆಗೆ ವೈನ್ ತಯಾರಿಕೆಗೆ ಬೇಕಾಗುವ ದ್ರಾಕ್ಷಿ ತಳಿಗಳನ್ನು ಬೆಳೆಸುವ ಸಲುವಾಗಿ ನರ್ಸರಿಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಆಡಳಿತ ಮಂಡಳಿ ಸದಸ್ಯರಾದ ಬಿ.ಎನ್. ನಂಜುಂಡಯ್ಯ, ಕಪಿಲ್ ಗ್ರೋವರ್, ಬಿ.ಎಂ. ಕೋಕರೆ ಹಾಗು ಲೋಕೇಶ್ ಗೌಡ ಸೇರಿದಂತೆ ಮತ್ತಿತರ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications