ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು ಗಲಭೆ : ಸಂಘಪರಿವಾರದ ಕೈವಾಡ

By Staff
|
Google Oneindia Kannada News

HD Kumaraswamy
ಬೆಂಗಳೂರು, ಜು. 12 : ಮೈಸೂರು ಗಲಭೆಗೆ ಬಿಜೆಪಿ ಅಂಗ ಸಂಸ್ಥೆಗಳು ನಡೆಸಿದ ಷಡ್ಯಂತ್ರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್ಎಸ್ಎಸ್ ನೇತೃತ್ವದ ಸಂಘ ಪರಿವಾರಗಳು ಮೈಸೂರಿನ ಶಾಂತಿಗೆ ಭಂಗ ತಂದಿವೆ ಎಂದು ತರಾಟೆಗೆ ತೆಗೆದುಕೊಂಡರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಸಂಘ ಪರಿವಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಅವರು, ಮೈಸೂರು ಗಲಭೆ ಸಂಬಂಧಿಸಿ ಕೆಲ ಸಂಘಟನೆಗಳ ಮೇಲೆ ನಿಷೇಧ ಹೇರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಒತ್ತಾಯಿಸಿದ್ದಾರೆ. ಆದರೆ, ಸಂಘ ಪರಿವಾರದ ಬಗ್ಗೆ ಚಕಾರ ಎತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ಸಂಘಟನೆ ನಿಷೇಧದ ಬಗ್ಗೆ ಪ್ರಧಾನಿಗೆ ಮುಖ್ಯಮಂತ್ರಿ ಪತ್ರ ಬರೆಯುತ್ತಾರೆ. ಬಿಜೆಪಿ ಅಂಗ ಸಂಸ್ಥೆಗಳ ಚಟುವಟಿಕೆ ಕುರಿತೂ ಪ್ರಧಾನಿಗೆ ಮಾಹಿತಿ ರವಾನಿಸುವ ಧೈರ್ಯವನ್ನು ಅವರು ತೋರುತ್ತಾರಾ ? ಸೆಕ್ಷಮ್ 144 ಕಲಂ ಜಾರಿಯಲ್ಲಿದ್ದರೂ ಟ್ರಕ್ ನಲ್ಲಿ ಜನರನ್ನು ಕರೆದುಕೊಂಡು ಹೋಗಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಸಂದರ್ಭದಲ್ಲಿ ಸರಕಾರ ಏನು ಮಾಡುತ್ತಿತ್ತು. ಗಲಭೆಕೋರರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿ ಗೃಹ ಸಚಿವರ ವೈಫಲ್ಯದಿಂದಲೇ ಮೈಸೂರಿನ ನೆಮ್ಮದಿ ಹಾಳಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಗಲಾಟೆ ಮೈಸೂರಿಗೆ ವಿಸ್ತರಣೆ ಆಗಿದೆ. ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲೂ ಸರಕಾರ ಎಡವಿದೆ ಎಂದು ಟೀಕಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X