ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ
ಬೆಂಗಳೂರು,
ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. id="toptextpromo">ಇತ್ತೀಚೆಗೆ
ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಎಂ ಕರುಣಾನಿಧಿ ಚರ್ಚೆ ಸಂದರ್ಭದಲ್ಲಿ ದಿನಾಂಕ ಗೊತ್ತುಪಡಿಸಲಾಗಿದೆ. ಬೆಂಗಳೂರು ಕಾರ್ಯಕ್ರಮಕ್ಕೆ ಕರುಣಾನಿಧಿ, ಚೆನ್ನೈನ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಚೆನ್ನೈನಲ್ಲಿ 10 ಅಥವಾ 13 ರಂದು ಸರ್ವಜ್ಞ ಪ್ರತಿಮೆಯನ್ನು ಅನಾವರಣಗೊಳಿಸಬಹುದು ಎಂದು ಯಡಿಯೂರಪ್ಪ ಸಲಹೆ ನೀಡಿದ್ದರು. ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿರುವ ಕರುಣಾನಿಧಿ ಅವರು ಆಗಸ್ಟ್ 13 ರಂದು ಕಾರ್ಯಕ್ರಮ ಆಯೋಜಿಸಲು ಒಪ್ಪಿಗೆ ಸೂಚಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications