ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ

ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಎಂ ಕರುಣಾನಿಧಿ ಚರ್ಚೆ ಸಂದರ್ಭದಲ್ಲಿ ದಿನಾಂಕ ಗೊತ್ತುಪಡಿಸಲಾಗಿದೆ. ಬೆಂಗಳೂರು ಕಾರ್ಯಕ್ರಮಕ್ಕೆ ಕರುಣಾನಿಧಿ, ಚೆನ್ನೈನ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಚೆನ್ನೈನಲ್ಲಿ 10 ಅಥವಾ 13 ರಂದು ಸರ್ವಜ್ಞ ಪ್ರತಿಮೆಯನ್ನು ಅನಾವರಣಗೊಳಿಸಬಹುದು ಎಂದು ಯಡಿಯೂರಪ್ಪ ಸಲಹೆ ನೀಡಿದ್ದರು. ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿರುವ ಕರುಣಾನಿಧಿ ಅವರು ಆಗಸ್ಟ್ 13 ರಂದು ಕಾರ್ಯಕ್ರಮ ಆಯೋಜಿಸಲು ಒಪ್ಪಿಗೆ ಸೂಚಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications