ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲ್ವೆ ಪರೀಕ್ಷೆಗೆ ಅಡ್ಡಿ; ಕರವೇ ಕಾರ್ಯಕರ್ತರ ಬಂಧನ

By Staff
|
Google Oneindia Kannada News

ಬೆಂಗಳೂರು, ಜು.13: ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟಿಸಿ ಕ್ವೀನ್ಸ್ ರಸ್ತೆಯ ಕಮಲಾ ಬಾಯಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ 40 ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಭಾನುವಾರ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ.

ಜುಲೈ 5ರಂದೇ ಈ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಕರವೇ ಕಾರ್ಯಕರ್ತರು ಪರೀಕ್ಷೆಗೆ ಅಡ್ಡಿಪಡಿಸಿದ್ದರಿಂದ ಜುಲೈ 12ಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಪ್ರತಿಬಾರಿಯೂ ಅನ್ಯಾಯವಾಗುತ್ತಿದೆ. ಹಲವಾರು ಸಲ ಹೋರಾಟ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೇಂದ್ರ ಸರಕಾರ ಹೀಗೆಯೇ ಮಲತಾಯಿ ಧೋರಣೆ ಅನುಸರಿಸಿದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಶಿವರಾಮೇಗೌಡ ಎಚ್ಚರಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X