ಸಲಿಂಗರತಿ : ಕೆಟ್ಟ ಪರಂಪರೆಗೆ ನಾಂದಿ

ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲ್ಲೂಕಿನ ಕುಕನೂರಿನಲ್ಲಿ ವಿದ್ಯಾನಂದ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಬಾಗವಹಿಸಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಹಿಂದಿನಿಂದ ಬಂದಿರುವ ಸಂಪ್ರದಾಯವನ್ನು ಉಳಿಸಿಕೊಳ್ಳಬೇಕು. ಬೇರೆ ಬೇರೆ ಕಾರಣಗಳಿಂದಾಗಿ ಅನೈತಿಕತೆ ಬೆಳೆಯಲು ಅವಕಾಶ ನೀಡುವುದು ಸರಿಯಲ್ಲ ಎಂದು ಹೇಳಿದರು.
ಈ ವಿಷಯಕ್ಕೆ ಕೇವಲ ಹಿಂದೂಗಳು ಮಾತ್ರ ವಿರೋಧ ವ್ಯಕ್ತಪಡಿಸಿಲ್ಲ. ಇಸ್ಲಾಂ, ಕ್ರೈಸ್ತ, ಬುದ್ಧ ಹಾಗೂ ಜೈನ ಸೇರಿ ಇತರೆ ಧರ್ಮಗಳ ಗುರುಗಳು, ಮುಖಂಡರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಇಂತಹ ಉದ್ದೇಶಿತ ತಿದ್ದುಪಡಿ ನಮ್ಮ ಸಂಸ್ಕತಿಗೆ ವಿರುದ್ಧವಾದುದು. ಅಲ್ಲದೆ, ಸರಕಾರ ಯಾವುದೇ ಕಾರಣಕ್ಕೂ ಈ ಸಂಬಂಧದ ಕಾನೂನಿನ ತಿದ್ದುಪಡಿ ತರಬಾರದು ಎಂದು ಶ್ರೀಗಳು ಪ್ರತಿಪಾದಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications