ದಿಲ್ಲಿಯಲ್ಲಿ ಮತ್ತೊಂದು ಅವಘಡ : 6 ಸಾವು

ನಿರ್ಮಾಣ ಹಂತದಲ್ಲಿ ನಡೆದ ದುರ್ಘಟನೆಯಲ್ಲಿ ಸಿಕ್ಕಿಕೊಂಡಿರುವ ವಾಹನ ಮತ್ತು ವಸ್ತುಗಳ ಹೊರತೆಗೆಯುವ ಕಾರ್ಯದಲ್ಲಿ ನಿರತವಾಗಿದ್ದ ಸಮಯದಲ್ಲಿ ಮೂರು ಕ್ರೇನ್ ಗಳು ಕುಸಿದು ಬಿದ್ದಿವೆ. ಈ ಸಂದರ್ಭದಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಆರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಐದು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ನಡೆದ ಘಟನೆಗೆ ಹೊಣೆ ಹೊತ್ತು ದೆಹಲಿ ಮೆಟ್ರೋ ಮುಖ್ಯಸ್ಥ ಶ್ರೀಧರನ್ ತಮ್ಮ ಹುದ್ದೆ ರಾಜೀರಾಮೆ ನೀಡುವುದಾಗಿ ಹೇಳಿದ್ದರು. ಆದರೆ, ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ರಾಜೀನಾಮೆಯನ್ನು ನಿರಾಕರಿಸಿದ್ದಾರೆ.
ಭಾನುವಾರ ನಡೆದ ದುರ್ಘಟನೆ
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ರೈಲು ಸೇತುವೆ ಕುಸಿದ ಪರಿಣಾಮ, ಐದಕ್ಕೂ ಹೆಚ್ಚು ಜನರು ಸತ್ತಿದ್ದರು. ಸುಮಾರು 15 ಜನರಿಗೆ ತೀವ್ರ ಗಾಯಗೊಂಡಿದ್ದರು. ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಲಜ್ ಪತ್ ಪುರ ಬಳಿಯ ಲೇಡಿ ಶ್ರೀರಾಮ್ ಕಾಲೇಜಿನ ಬಳಿ ಇರುವ ನಿರ್ಮಾಣ ಹಂತದಮೆಟ್ರೋ ರೈಲು ಸೇತುವೆಯ ಒಂದು ಕಂಬ ಕುಸಿದು ಬಿತ್ತು. ಕಾಂಕ್ರೀಟ್ ಸ್ಲ್ಯಾಬ್ ಗಳು ನೆಲಕ್ಕಪ್ಪಳಿಸಿದವು. ಕಂಬ ನೆಲಕ್ಕುರಳಿದ ಪರಿಣಾಮದಿಂದ ನೀರು ಸರಬರಾಜಿನ ಪೈಪು ಒಡೆದು, ಸುತ್ತಮುತ್ತಲಿನ ಪ್ರದೇಶವೆಲ್ಲಾ ಜಲಾವೃತಗೊಂಡಿವೆ.
ಘಟನೆ ನಡೆದ ಸಂದರ್ಭದಲ್ಲಿ ಸುಮಾರು 25 ಜನ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಅವಶೇಷಗಳ ಅಡಿಯಲ್ಲಿ ಅಳಿದುಳಿದಿರುವ ವ್ಯಕ್ತಿಗಳನ್ನು ಬದುಕಿಸುವ ಕಾರ್ಯ ಸಾಗಿದೆ. ಗಾಯಾಳುಗಳನ್ನು ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದವು.
(ಏಜನ್ಸೀಸ್)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications