ಬಿಬಿಎಂಪಿ ಚುನಾವಣೆ ವಿಳಂಬ; ಕೋರ್ಟ್ ತರಾಟೆ
ಬೆಂಗಳೂರು, ಜು. 14 : ಬಿಬಿಎಂಪಿ ಚುನಾವಣೆ ವಿಳಂಬ ಹಾಗೂ ವಾರ್ಡ್ ಗಳ ಮರುಹಂಚಿಕೆಗೆ ಸಂಬಂಧಿಸಿದಂತೆ ಮಂಗಳವಾರ ಹೈಕೋರ್ಟ್ ರಾಜ್ಯ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಪದೆಪದೇ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಕಾರಣವೇನು ? ಜುಲೈ 24 ರಂದು ನಡೆಯುವ ವಿಚಾರಣೆಯಲ್ಲಿ ಸ್ಪಷ್ಟಪಡಿಸಿ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಬಿಬಿಎಂಪಿ ಚುನಾವಣೆಗಳ ವಿಳಂಬ ಮತ್ತು ವಾರ್ಡ್ ಗಳ ಮರುಹಂಚಿಕೆಯಲ್ಲಿ ತಾರತಮ್ಯ ಆಗಿರುವ ವಿರುದ್ಧ ನ್ಯಾಯವಾದಿ ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರಕಾರದ ನಡೆದುಕೊಳ್ಳುತ್ತಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿತು. ಜುಲೈ 31ರೊಳಗೆ ಬಿಬಿಎಂಪಿ ಚುನಾವಣೆಗಳನ್ನು ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ, ಸರಕಾರ ಅನಗತ್ಯವಾಗಿ ಚುನಾವಣೆಗಳನ್ನು ಮುಂದೂಡುತ್ತಿದೆ.
ಅಲ್ಲದೇ ಇತ್ತೀಚೆಗೆ ವಾರ್ಡ್ ಗಳ ಮರುಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಿತು. ಅಧಿಸೂಚನೆ ಹೊರಡಿಸಿದ ನಂತರ ಆಕ್ಷೇಪಣೆಗಳಿಗೆ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ, ಸರಕಾರ ನೀಡಿದ ಕಾಲಾವಕಾಶದ ದಿನ ಕೇವಲ 12 ದಿನ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಮತ್ತು ವಾರ್ಡ್ ಮರುವಿಂಗಡಣೆ ಮಾಡಬೇಕಾದರೆ, ಎಲ್ಲ ವಾರ್ಡ್ ಗಳ ಜನಸಂಖ್ಯೆಯನ್ನು ಸಮಾನವಾಗಿರಬೇಕು. ಆದರೆ, ಸರಕಾರದ ನೇತೃತ್ವದಲ್ಲಿ ನಡೆದ ವಾರ್ಡ್ ವಿಂಗಡಣೆಯಲ್ಲಿ ಅಸಮಾನತೆ ಇದೆ. ಒಂದು ವಾರ್ಡ್ ಗೆ 20 ಸಾವಿರ ಜನಸಂಖ್ಯೆ ಇದ್ದರೆ, ಇನ್ನೊಂದು ವಾರ್ಡ್ ಗೆ 35 ಸಾವಿರ ಮತ್ತೊಂದಕ್ಕೆ 15 ಸಾವಿರ ಮಾಡಿದೆ. ಇದು ನ್ಯಾಯಾಲಯ ಅಸಮಾಧಾನಕ್ಕೆ ಕಾರಣವಾಯಿತು. ಇದಕ್ಕೆ ಸಂಬಂಧಿಸಿದಂತೆ ಜುಲೈ 24 ರಂದು ನಡೆಯುವ ವಿಚಾರಣೆಯಲ್ಲಿ ಸ್ಪಷ್ಟನೆ ನೀಡುವಂತೆ ಸರಕಾರಕ್ಕೆ ಆದೇಶ ನೀಡಿದೆ.
(ದಟ್ಸ್ ಕನ್ನಡ ವಾರ್ತೆ)
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications