ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಂಸದ ಜನಾರ್ಧನಸ್ವಾಮಿಗೆ ಪಿತೃ ವಿಯೋಗ
ಬೆಂಗಳೂರು, ಜು. 14 : ಅನಾರೋಗ್ಯದಿಂದ ಬಳಲುತ್ತಿದ್ದ ಚಿತ್ರದುರ್ಗದ ಲೋಕಸಭಾ ಸದಸ್ಯ ಜನಾರ್ಧನಸ್ವಾಮಿಯವರ ತಂದೆ ಡಿ. ವೆಂಕಟಪ್ಪ (89) ಅವರು ಸೋಮವಾರ ನಿಧನರಾದರು. ವೆಂಕಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಕಳ್ಳಹಟ್ಟಿಯವರಾದ ವೆಂಕಟಪ್ಪನವರು ವೃತ್ತಿಯಿಂದ ಶಿಕ್ಷಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ. ಕಳೆದ ಒಂದು ದಶಕದಿಂದ ಅಮೆರಿಕದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ ಜನಾರ್ದನಸ್ವಾಮಿ ಅವರು, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Tuesday, July 14, 2009, 14:43 [IST]