ಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ

Siddaramaiah
ಬೆಂಗಳೂರು, ಜು. 14 : ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಗೆ ಭಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಗಳೆ ಕಾರಣ. ಶ್ರೀರಾಮಸೇನೆ ಸಂಘಟನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮೈಸೂರಿನ ಗಲಭೆಯಲ್ಲಿ ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳ ಕೈವಾಡವಿಲ್ಲ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರಕಾರ ವಿಫಲವಾಗಿದೆ. ಬಿಜೆಪಿ ಪಕ್ಷದ ಕೆಲ ಹಿತಾಸಕ್ತಿಗಳು ಹಿಂದೂಗಳಿಗೆ ಪ್ರಚೋದನೆ ನೀಡಿ ಈ ಕೃತ್ಯ ಮಾಡಲು ಪ್ರೇರೆಪಿಸಿವೆ ಎಂದು ಆರೋಪಿಸಿದರು.

ಮಂಗಳೂರಿನಲ್ಲಿ ಗಲಭೆ ಎಬ್ಬಿಸಿದ್ದ ಶ್ರೀರಾಮಸೇನೆ ಮತ್ತು ಭಜರಂಗದಳ ಸಂಘಟನೆಗಳು ಮೈಸೂರಿನ ಘಟನೆಯಲ್ಲಿ ಮುಖ್ಯಪಾತ್ರ ವಹಿಸಿವೆ. ಆದ್ದರಿಂದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸುವಂತೆ ಸಿದ್ದರಾಮಯ್ಯ ಸರಕಾರವನ್ನು ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+