ಸಲಿಂಗರತಿ : ರಾಮದೇವ್ ಸೆಲೀನಾ ಜಟಾಪಟಿ
ಮುಂಬೈ, ಜು. 15 : ಧಾರ್ಮಿಕ ಗುರುಗಳು ಹೆಣ್ಣುಮಕ್ಕಳನ್ನು ದೈವದ ಸಮಾನ ಕಾಣುತ್ತಾರೆ. ಬ್ರಹ್ಮಚಾರಿಯಾಗಿರುವ ಯೋಗಗುರು ಬಾಬಾ ರಾಮದೇವ್ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ನನಗಿಂತ ನನ್ನ ಲೈಂಗಿಕ ಜೀವನದ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದಾರೆ. ಮಾನವ ಹಕ್ಕುಗಳಿಗಾಗಿ ಹೋರಾಟ ನಡೆಸಿರುವ ಸಾಮಾನ್ಯ ನಟಿಯನ್ನು ಸಾರ್ವಜನಿಕವಾಗಿ ಹೀಗೆ ಅವಹೇಳನ ಮಾಡುವುದು ಅವರ ಘನತೆಗೆ ತಕ್ಕುದಲ್ಲ. ಅವರ ಬ್ರಹ್ಮಚಾರಿತ್ವವನ್ನು ನಾನು ಕೂಡಾ ಪ್ರಶ್ನಿಸಬೇಕಾಗುತ್ತದೆ ಎಂದು ಬಾಲಿವುಡ್ ನಟಿ ಸೆಲೀನಾ ಜೈಟ್ಲಿ ಯೋಗಗುರು ಬಾಬಾ ರಾಮದೇವ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಲಿಂಗರತಿ ಹೋರಾಟಕ್ಕೆ ಸೆಲೀನಾ ಜೈಟ್ಲಿ ಸಾಥ್ ನೀಡಿದ್ದರು. ಇತ್ತೀಚೆಗೆ ದೆಹಲಿ ಹೈಕೋರ್ಟ್ ಸಲಿಂಗರತಿ ಶಿಕ್ಷಾರ್ಹವಲ್ಲ ಎಂದು ತೀರ್ಪು ನೀಡಿದ್ದರಿಂದ ಇದರ ವಿರುದ್ಧ ದೇಶಾದ್ಯಂತ ವಾದ-ವಿವಾದಗಳು ತೀವ್ರಗೊಂಡಿವೆ. ಧಾರ್ಮಿಕ ಮುಖಂಡರು ದೆಹಲಿ ಹೈಕೋರ್ಟ್ ನೀಡಿದ ತೀರ್ಪಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಸುಪ್ರಿಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರಿಂಕೋರ್ಟ್ ಮೊರೆ ಹೋಗಿರುವವರಲ್ಲಿ ಯೋಗಗುರು ಬಾಬಾ ರಾಮದೇವ್ ಕೂಡಾ ಬಬ್ಬರು.
ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಕಿಡಿಕಾರಿದ್ದ ಗುರು ರಾಮ್ ದೇವ್ ಅವರು ಇತ್ತೀಚೆಗೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಸೆಲೀನಾ ಜೈಟ್ಲಿ ವಿರುದ್ಧ ಹರಿಹಾಯ್ದಿದ್ದರು. ಸೆಲೀನಾ ಜೈಟ್ಲಿಗೆ ಭಾರತೀಯ ಸಂಸ್ಕೃತಿಯೇ ಗೊತ್ತಿಲ್ಲ. ಪೋಷಕರಿಂದ ದೂರವಿರುವ ಈಕೆ. ತಿಂಗಳಿಗೆ ಒಬ್ಬರಂತೆ ಬಾಯ್ ಫ್ರೆಂಡ್ ಗಳನ್ನು ಬದಲಾಯಿಸಿಕೊಳ್ಳುತ್ತಾ ಸಂಸ್ಕೃತಿ, ಸಂಸ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ರಾಮದೇವ್ ಆರೋಪಿಸಿದ್ದರು.
ಯಾವ ಕಡೆಯಿಂದಲೂ ನೋಡಿದರೂ ಬಾಬಾ ರಾಮದೇವ್ ಬ್ರಹ್ಮಚಾರಿ ಅಂತ ಅನಿಸುತ್ತಿಲ್ಲ. ಅವರೊಬ್ಬ ಕೌರವರ ನಾಯಕ ಇದ್ದ ಹಾಗೆ. ಜನಸಮೂಹದ ಮುಂದೆ ಕೌರವರು ದ್ರೌಪದಿಯ ವಸ್ತ್ರಾಪಹರಣ ಮಾಡಿದ ಹಾಗೆ, ದೇಶದ ಜನತೆ ಎದುರಿಗೆ ನನ್ನ ಮೇಲೆ ಕೀಳು ಮಟ್ಟದ ಆರೋಪ ಮಾಡಿದ್ದಾರೆ. ನಾನು ಪ್ರತಿ ತಿಂಗಳಿಗೊಬ್ಬ ಬಾಯ್ ಫ್ರೆಂಡ್ ನನ್ನು ಬದಲಾಯಿಸುತ್ತೇನೆ ಎನ್ನುವುದು ಯೋಗಿಗೆ ಹೇಗೆ ಗೊತ್ತಾಯಿತು. ಯೋಗಿಗುರು ಬಾಬಾನ ಬ್ರಹ್ಮಚಾರಿತ್ವವನ್ನೇ ಪ್ರಶ್ನಿಸಬೇಕಾಗುತ್ತದೆ. ಕಂಡ ಕಂಡ ಹೆಣ್ಣು ಮಕ್ಕಳಿಗೆ ಬಾಯಿಗೆ ಬಂದ ಹಾಗೆ ಮಾತನಾಡುವುದು ಧಾರ್ಮಿಕ ಗುರುವಿಗೆ ಎಷ್ಟು ಸರಿ ಎಂದು ಸೆಲೀನಾ ಕೆಂಡ ಕೆಂಡವಾಗಿದ್ದಾರೆ.
(ಏಜನ್ಸೀಸ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications