ಸಲಿಂಗರತಿ : ರಾಮದೇವ್ ಸೆಲೀನಾ ಜಟಾಪಟಿ
ಮುಂಬೈ, ಜು. 15 : ಧಾರ್ಮಿಕ ಗುರುಗಳು ಹೆಣ್ಣುಮಕ್ಕಳನ್ನು ದೈವದ ಸಮಾನ ಕಾಣುತ್ತಾರೆ. ಬ್ರಹ್ಮಚಾರಿಯಾಗಿರುವ ಯೋಗಗುರು ಬಾಬಾ ರಾಮದೇವ್ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ನನಗಿಂತ ನನ್ನ ಲೈಂಗಿಕ ಜೀವನದ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದಾರೆ. ಮಾನವ ಹಕ್ಕುಗಳಿಗಾಗಿ ಹೋರಾಟ ನಡೆಸಿರುವ ಸಾಮಾನ್ಯ ನಟಿಯನ್ನು ಸಾರ್ವಜನಿಕವಾಗಿ ಹೀಗೆ ಅವಹೇಳನ ಮಾಡುವುದು ಅವರ ಘನತೆಗೆ ತಕ್ಕುದಲ್ಲ. ಅವರ ಬ್ರಹ್ಮಚಾರಿತ್ವವನ್ನು ನಾನು ಕೂಡಾ ಪ್ರಶ್ನಿಸಬೇಕಾಗುತ್ತದೆ ಎಂದು ಬಾಲಿವುಡ್ ನಟಿ ಸೆಲೀನಾ ಜೈಟ್ಲಿ ಯೋಗಗುರು ಬಾಬಾ ರಾಮದೇವ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಲಿಂಗರತಿ ಹೋರಾಟಕ್ಕೆ ಸೆಲೀನಾ ಜೈಟ್ಲಿ ಸಾಥ್ ನೀಡಿದ್ದರು. ಇತ್ತೀಚೆಗೆ ದೆಹಲಿ ಹೈಕೋರ್ಟ್ ಸಲಿಂಗರತಿ ಶಿಕ್ಷಾರ್ಹವಲ್ಲ ಎಂದು ತೀರ್ಪು ನೀಡಿದ್ದರಿಂದ ಇದರ ವಿರುದ್ಧ ದೇಶಾದ್ಯಂತ ವಾದ-ವಿವಾದಗಳು ತೀವ್ರಗೊಂಡಿವೆ. ಧಾರ್ಮಿಕ ಮುಖಂಡರು ದೆಹಲಿ ಹೈಕೋರ್ಟ್ ನೀಡಿದ ತೀರ್ಪಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಸುಪ್ರಿಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರಿಂಕೋರ್ಟ್ ಮೊರೆ ಹೋಗಿರುವವರಲ್ಲಿ ಯೋಗಗುರು ಬಾಬಾ ರಾಮದೇವ್ ಕೂಡಾ ಬಬ್ಬರು.
ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಕಿಡಿಕಾರಿದ್ದ ಗುರು ರಾಮ್ ದೇವ್ ಅವರು ಇತ್ತೀಚೆಗೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಸೆಲೀನಾ ಜೈಟ್ಲಿ ವಿರುದ್ಧ ಹರಿಹಾಯ್ದಿದ್ದರು. ಸೆಲೀನಾ ಜೈಟ್ಲಿಗೆ ಭಾರತೀಯ ಸಂಸ್ಕೃತಿಯೇ ಗೊತ್ತಿಲ್ಲ. ಪೋಷಕರಿಂದ ದೂರವಿರುವ ಈಕೆ. ತಿಂಗಳಿಗೆ ಒಬ್ಬರಂತೆ ಬಾಯ್ ಫ್ರೆಂಡ್ ಗಳನ್ನು ಬದಲಾಯಿಸಿಕೊಳ್ಳುತ್ತಾ ಸಂಸ್ಕೃತಿ, ಸಂಸ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ರಾಮದೇವ್ ಆರೋಪಿಸಿದ್ದರು.
ಯಾವ ಕಡೆಯಿಂದಲೂ ನೋಡಿದರೂ ಬಾಬಾ ರಾಮದೇವ್ ಬ್ರಹ್ಮಚಾರಿ ಅಂತ ಅನಿಸುತ್ತಿಲ್ಲ. ಅವರೊಬ್ಬ ಕೌರವರ ನಾಯಕ ಇದ್ದ ಹಾಗೆ. ಜನಸಮೂಹದ ಮುಂದೆ ಕೌರವರು ದ್ರೌಪದಿಯ ವಸ್ತ್ರಾಪಹರಣ ಮಾಡಿದ ಹಾಗೆ, ದೇಶದ ಜನತೆ ಎದುರಿಗೆ ನನ್ನ ಮೇಲೆ ಕೀಳು ಮಟ್ಟದ ಆರೋಪ ಮಾಡಿದ್ದಾರೆ. ನಾನು ಪ್ರತಿ ತಿಂಗಳಿಗೊಬ್ಬ ಬಾಯ್ ಫ್ರೆಂಡ್ ನನ್ನು ಬದಲಾಯಿಸುತ್ತೇನೆ ಎನ್ನುವುದು ಯೋಗಿಗೆ ಹೇಗೆ ಗೊತ್ತಾಯಿತು. ಯೋಗಿಗುರು ಬಾಬಾನ ಬ್ರಹ್ಮಚಾರಿತ್ವವನ್ನೇ ಪ್ರಶ್ನಿಸಬೇಕಾಗುತ್ತದೆ. ಕಂಡ ಕಂಡ ಹೆಣ್ಣು ಮಕ್ಕಳಿಗೆ ಬಾಯಿಗೆ ಬಂದ ಹಾಗೆ ಮಾತನಾಡುವುದು ಧಾರ್ಮಿಕ ಗುರುವಿಗೆ ಎಷ್ಟು ಸರಿ ಎಂದು ಸೆಲೀನಾ ಕೆಂಡ ಕೆಂಡವಾಗಿದ್ದಾರೆ.
(ಏಜನ್ಸೀಸ್)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications