ಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್

ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ ಜಮೀನು ಖರೀದಿಯಲ್ಲಿ ಸುಮಾರು 300 ಕೋಟಿ ರುಪಾಯಿಗಳ ಅವ್ಯವಹಾರವಾಗಿದೆ ಎಂದು ಜೆಡಿಎಸ್ ಆರೋಪಿಸಿ ನಿಲುವಳಿಗೆ ಸೂಚನೆ ಮಂಡಿಸಲು ಮುಂದಾದಾಗ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ರೇವಣ್ಣ ನಿಲುವಳಿ ಸೂಚನೆಯ ಸಭಾಧ್ಯಕ್ಷರ ಗಮನ ಸೆಳೆಯಲು ಪ್ರಾಥಮಿಕ ಪ್ರಸ್ತಾವನೆ ಮಂಡಿಸುವ ಸಂದರ್ಭದಲ್ಲಿ ಜೆಡಿಎಸ್ ನ ಬಾಲಕೃಷ್ಣ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಬಳಸಿದ ಶಬ್ಧದಿಂದ ಸದನ ಸಂತೆಯಾಗಿ ಮಾರ್ಪಟ್ಟಿತು.
ಆ ಶಬ್ಧದಿಂದ ಕೆರಳಿದ ಸಿಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಿಸಿ ಪಾಟೀಲ್, ಸಿದ್ದು ಸವದಿ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಧರಣಿ ನಡೆಸಿದರು. ಮುಖ್ಯ ಸಚೇತಕ ಜೀವರಾಜ್ ಆಡಳಿತ ಪಕ್ಷದ ಸದಸ್ಯರ ಧರಣಿಯನ್ನು ತಡೆಯುವ ಯತ್ನ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಬಿಜೆಪಿ ಸದಸ್ಯರ ನಡುವೆ ವಾಗ್ವಾದ, ಮಾತಿನ ಚಕಮಕಿ ತಾರಕಕ್ಕೇರಿತು. ಮಧ್ಯೆ ಪ್ರವೇಶಿಸಿದ ಸಭಾಧ್ಯಕ್ಷ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಉದ್ದೇಶಿಸಿ ಬಾಲಕೃಷ್ಣ ಬಳಸಿದ ಶಬ್ದವನ್ನು ಕಡತದಿಂದ ತೆಗೆದುಹಾಕಲು ಸೂಚಿಸಿದರು.
ವಿಷಯ ಪ್ರಸ್ತಾಪಿಸಿದ ರೇವಣ್ಣ, ವಸತಿ ಖಾತೆ ಮಾಜಿ ಸಚಿವರ ಸಹೋದರ ಎನ್ ಎಸ್ ಶ್ರೀನಿವಾಸಶೆಟ್ಟಿ ರೈತದಿಂದ 5-6 ಲಕ್ಷ ರುಪಾಯಿಗೆ ಜಮೀನು ಖರೀದಿಸಿ 50 ಲಕ್ಷ ರುಪಾಯಿಗಳಿಗೆ ಮಾರಾಟ ಮಾಡಿ ಹಣ ಪಡೆದಿದ್ದಾರೆ ಎಂದು ಆರೋಪಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶೀಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿ ವೆಂಕಟಾಪುರ, ಸುಗಟವಾರು, ಹೊಸಪೇಟೆ ಮತ್ತು ಬಸವನಹಳ್ಳಿ ಗ್ರಾಮಗಳ ವಿವಿಧ ಸರ್ವೆ ನಂಬರ್ 2 ರಿಂದ 390 ರವರೆಗೆ ಗೃಹ ಮಂಡಳಿ 958 ಎಕರೆ ಜಮೀನು ಖರೀದಿಸಿದೆ ಎಂದು ಕಿಡಿಕಾರಿದರು.
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications