ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೃಷ್ಣಬೈರೇಗೌಡರ ಮನೆ ಮೇಲೆ ಕಾಂಗ್ರೆಸ್ಸಿಗರ ದಾಳಿ !!
ಬೆಂಗಳೂರು, ಜು. 16 : ಬೆಂಗಳೂರು ಮಹಾನಗರಪಾಲಿಕೆ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಶಾಸಕ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಬೈರೇಗೌಡರ ಮನೆ ಮೇಲೆ ದಾಳಿ ಮಾಡಿ ದಾಂದಲೆ ನಡೆಸಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಬ್ಯಾಟರಾಯನಪುರ ನಗರಸಭೆ ಮಾಜಿ ಸದಸ್ಯ ಚಕ್ರಪಾಣಿ ಅವರ ಶಿಷ್ಯರು ಎನ್ನಲಾದ ಕಾಂಗ್ರೆಸ್ ಕಾರ್ಯಕರ್ತರಾದ ಲಕ್ಷ್ಮೀನಾರಾಯಣ ಮತ್ತು ಮಂಜುನಾಥ್ ಎನ್ನುವವರು ತಮ್ಮ ಬೆಂಬಲಿಗರೊಂದಿಗೆ ಸಹಕಾರ ನಗರದಲ್ಲಿರುವ ಬೈರೇಗೌಡರ ಮನೆಗೆ ನುಗ್ಗಿ ಗಲಾಟೆ ನಡೆಸಿ, ಮನೆಯಲ್ಲಿದ್ದವರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಯತ್ನ ನಡೆಸಿದರು ಎಂದು ಹೇಳಲಾಗಿದೆ. ಈ ಸಂಬಂಧ ಶಾಸಕ ಬೈರೇಗೌಡ ಯಾವುದೇ ದೂರು ನೀಡಿಲ್ಲದಿದ್ದರೂ ವ್ಯಾಪ್ತಿಯಲ್ಲಿ ಬರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, July 16, 2009, 11:51 [IST]