ಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ : ಸಿಎಂ

ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ಕೊಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು. ನಿಯಮ 330ರ ಅಡಿ ಜೆಡಿಎಸ್ ನಾಯಕ ಎಂ ಸಿ ನಾಣಯ್ಯ ಮಂಡಿಸಿದ ಪ್ರಸ್ತಾಪಕ್ಕೆ ಉತ್ತರಿಸಿ, ಈ ವಿಚಾರದಲ್ಲಿ ಯಾರ ಮುಲಾಜಿಗೂ ಒಳಗಾಗುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳ ಕೈಗೊಂಬೆಯೂ ಆಗುವುದಿಲ್ಲ. ಮುಕ್ತವಾಗಿ ಸಮಾಲೋಚಿಸಲು ಅವಕಾಶವಿದೆ. ಭ್ರಷ್ಟರಿಗೆ ರಕ್ಷಣೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಎಂ ಸಿ ನಾಣಯ್ಯ ಹಾಗೂ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ, ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಸಂಬಂಧ ರಾಜ್ಯಪಾಲರ ಅವಧಿಯಲ್ಲಿ ಈ ಹಿಂದೆ ಹೊರಡಿಸಿದ್ದ ಸುಗ್ರಿವಾಜ್ಞೆ ಹಾಗೆಯೇ ಇದೆ. ಅದನ್ನು ವಿಧೇಯಕದ ರೂಪದಲ್ಲಿ ತರಬೇಕು. ಅದಕ್ಕೆ ಒಪ್ಪಿಗೆ ಕೊಡಲಾಗುವುದು. ಈ ತಿಂಗಳ 29ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications