ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೀಟಾ ಪ್ರಕರಣ : ಸೋನಿಯಾ ಕ್ಷಮೆಯಾಚನೆ

By Staff
|
Google Oneindia Kannada News

Sonia Gandhi
ನವದೆಹಲಿ, ಜು. 16 : ಯುಪಿಸಿಸಿ ಅಧ್ಯಕ್ಷೆ ರೀಟಾ ಜೋಶಿ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ಮಾಡಿರುವ ಅನಾಗರಿಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆಯಾಚಿಸಿದ್ದಾರೆ. ಇದೊಂದು ವಿಷಾದಕರ ಘಟನೆ, ಇಂತಹ ಘಟನೆಗಳು ಮರಕಳಿಸಬಾರದು ಎಂದು ಅವರು ಹೇಳಿದ್ದಾರೆ.

ತಮ್ಮ ವಿರುದ್ಧ ಅನಾಗರಿಕ ಹೇಳಿಕೆ ನೀಡಿರುವ ಯುಪಿಸಿಸಿ ಅಧ್ಯಕ್ಷೆ ರೀಟಾ ಜೋಶಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮೌನ ವಹಿಸಿರುವುದು ಏಕೆ ಎಂದು ಮಾಯಾವತಿ ಪ್ರಶ್ನಿಸಿದ್ದರು. ಸೋನಿಯಾ ಮೌನ ನೋಡಿದರೆ ರೀಟಾ ಅವರ ಅನಾಗರಿಕ ಹೇಳಿಕೆಯನ್ನೂ ಸಮರ್ಥಿಸಿಕೊಳ್ಳುವಂತಿದೆ. ಕಾಂಗ್ರೆಸ್ ಪಕ್ಷವೇ ರೀಟಾ ಬೆನ್ನಿಗೆ ನಿಂತಿದೆ. ಇದು ದೇಶದ ಮಹಿಳೆಯರಿಗೆ ಮಾಡಿದ ಭಾರಿ ಅವಮಾನ. ಕಾಂಗ್ರೆಸ್ ಪಕ್ಷದಿಂದ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಅವಮಾನಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರಪ್ರದೇಶದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆದರೆ ಸರಕಾರದ ಅಧಿಕಾರಿಗಳು ಇಪ್ಪತ್ತು ಸಾವಿರ ಪರಿಹಾರ ಹಣ ನೀಡುತ್ತಾರೆ. ಒಂದು ಹೆಣ್ಣಿನ ಶೀಲಕ್ಕೆ ಸರಕಾರ ಬೆಲೆ ಕಟ್ಟುತ್ತಿದೆ. ಇದೇ ರೀತಿ ಮುಖ್ಯಮಂತ್ರಿ ಮಾಯಾವತಿಗೇನಾದರೂ ಆದರೆ, ನಾವು ಒಂದು ಕೋಟಿ ರುಪಾಯಿ ಪರಿಹಾರ ನೀಡಲು ಸಿದ್ದ ಎನ್ನುವ ವಿವಾದಕಾರಿ ಹೇಳಿಕೆಯನ್ನು ರೀಟಾ ಜೋಶಿ ನೀಡಿದ್ದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X