ಉಪ್ರ : ಅವಹೇಳನಕಾರಿ ಭಾಷಣ. ರೀಟಾ ಬಂಧನ

ಉತ್ತರಪ್ರದೇಶದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆದರೆ ಸರಕಾರದ ಅಧಿಕಾರಿಗಳು ಇಪ್ಪತ್ತು ಸಾವಿರ ಪರಿಹಾರ ಹಣ ನೀಡುತ್ತಾರೆ. ಒಂದು ಹೆಣ್ಣಿನ ಶೀಲಕ್ಕೆ ಸರಕಾರ ಬೆಲೆ ಕಟ್ಟುತ್ತಿದೆ. ಇದೇ ರೀತಿ ಮುಖ್ಯಮಂತ್ರಿ ಮಾಯಾವತಿಗೇನಾದರೂ ಆದರೆ, ನಾವು ಒಂದು ಕೋಟಿ ರುಪಾಯಿ ಪರಿಹಾರ ನೀಡಲು ಸಿದ್ದ ಎನ್ನುವ ವಿವಾದಕಾರಿ ಹೇಳಿಕೆಯನ್ನು ರೀಟಾ ಜೋಶಿ ನೀಡಿದ್ದರು.
ಈ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಬಿಎಸ್ಪಿ ಕಾರ್ಯಕರ್ತರು ರೀಟಾ ಜೋಷಿಯವರ ಮನೆಗೆ ನುಗ್ಗಿ ಮನೆಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿದ್ದಾರೆಂದು ವರದಿಯಾಗಿದೆ. ರೀಟಾ ಜೋಷಿ ಬಂಧನವನ್ನು ಪೋಲಿಸ್ ದೃಢಪಡಿಸಿದ್ದಾರೆ.
(ಏಜನ್ಸೀಸ್)












Click it and Unblock the Notifications