ಅಭಿಷೇಕ್ ಪ್ರಕರಣ ತನಿಖೆಗೆ ಆದೇಶ

ಜೆಡಿಎಸ್ ನ ಅಬ್ದುಲ್ ಅಜೀಮ್ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ಅಗ್ನಿಶಾಮಕ ಪಡೆ, ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತಿತರ ಭದ್ರತಾದಳದ ತಂಡಗಳು ಅವಿರತ ಶೋಧ ನಡೆಸಿದರಾದರೂ ಬಾಲಕ ಪತ್ತೆಯಾಗಿಲ್ಲ ಎಂದು ಹೇಳಿದರು.
ಘಟನೆ ನಡೆದ ನಂತರ ತಾವು ಸ್ಥಳಕ್ಕೆ ಧಾವಿಸಿದ್ದಾಗಿಯೂ, ಶೋಕತಪ್ತ ತಂದೆತಾಯಿಗೆ ಸಾಂತ್ವನ ಹೇಳಿ ಪರಿಹಾರ ಧನ ನೀಡಿದುದಾಗಿಯೂ ಯಡಿಯೂರಪ್ಪ ತಿಳಿಸಿದರು. ಬಾಲಕನ ಪತ್ತೆಗೆ ಶತಪ್ರಯತ್ನ ಮಾಡಿದುದನ್ನು ಪುನರುಚ್ಛರಿಸಿದರು. ಈ ಘಟನೆಯಿಂದ ಬಿಬಿಎಂಪಿ ಅಧಿಕಾರಿಗಳ ಮೇಲೆ ಸಾರ್ವಜನಿಕರಿಂದ ಭಾರೀ ಟೀಕೆ ಬಂದುದನ್ನು ಅವರು ನೆನಪಿಸಿಕೊಂಡರು.
ಆಗಿದ್ದಾಯಿತು. ಮುಂದೆ ಇಂಥ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗನ್ನು ಕೈಗೊಳ್ಳಲಾಗಿದೆ ಎಂದರು ಬಿಎಸ್ವೈ. ತೆರೆದುಕೊಂಡಿರುವ ನಗರದ ದೊಡ್ಡ ಚರಂಡಿಗಳಿಗೆ ಎರಡೂ ಬದಿ ಒಟ್ಟು 143 ಕಿ.ಮೀ ಬೇಲಿ ಹಾಕಲು ತೀರ್ಮಾನಿಸಲಾಗಿದೆ. ಈಗಾಗಲೇ 43 ಕಿ.ಮೀ ಉದ್ದದ ಬೇಲಿ ಹಾಕಲಾಗಿದೆ ಎಂದರು.
ಚರ್ಚೆಯಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಇನ್ನೊಬ್ಬ ಜೆಡಿಎಸ್ ಸದಸ್ಯ ಎಂ. ಸಿ. ನಾಣಯ್ಯ, ಬಾಲಕನ ನಾಪತ್ತೆ ಪ್ರಕರಣ ಗಂಭೀರವಾದ ಲೋಪ, ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications