ಆ.18 ರಂದು ಚನ್ನಪಟ್ಟಣ ಉಪಚುನಾವಣೆ
ಬೆಂಗಳೂರು, ಜು. 17 : ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಆಗಸ್ಟ್ 18 ರಂದು ನಡೆಸಲು ಕೇಂದ್ರ ಚುನಾವಣೆ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಈ ಕ್ಷೇತ್ರದಲ್ಲಿ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ.
ರಾಜ್ಯದ 5 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಗಳು ನಡೆಯಬೇಕಾಗಿದೆ. ರಾಜ್ಯ ಚುನಾವಣೆ ಆಯೋಗದ ಕಚೇರಿಯಿಂದ ಐದು ಕ್ಷೇತ್ರಗಳಿಗೂ ಏಕಕಾಲದಲ್ಲಿ ಉಪಚುನಾವಣೆ ನಡೆಸುವಂತೆ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಆದರೆ, ಆಯೋಗದಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಮಾತ್ರ ವೇಳಾಪಟ್ಟಿ ಪ್ರಕಟವಾಗಿದೆ. ಚನ್ನಪಟ್ಟಣ ಶಾಸಕರಾಗಿದ್ದ ಸಿಪಿ ಯೋಗೀಶ್ವರ ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಯೋಗೀಶ್ವರ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ದ ಸೋಲನುಭವಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications